ಯುಎಇ (ಸಂಯುಕ್ತ ಅರಬ್ ರಾಷ್ಟ್ರಗಳು) ಒಕ್ಕಲಿಗರ ಸಂಘದ ವತಿಯಿಂದ ದುಬೈನ 244, ಔದ್ ಮೆಹ್ತಾದ ಶೇಕ್ ರಶೀದ್ ಆಡಿಟೋರಿಯಂನಲ್ಲಿ ಅ.29ರಂದು ಮಧ್ಯಾಹ್ನ 3 ಗಂಟೆಗೆ ನಾಡಪ್ರಭು ಕೆಂಪೇಗೌಡ ಉತ್ಸವವನ್ನು ಆಯೋಜಿಸಲಾಗಿದೆ.
ಮುಖ್ಯ ಅತಿಥಿಗಳಾಗಿ ಆದಿಚುಂಚನಗಿರಿ ಪೀಠಾಧ್ಯಕ್ಷ ಶ್ರೀನಿರ್ಮಲಾನಂದನಾಥ ಸ್ವಾಮೀಜಿ, ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಸೇರಿದಂತೆ ಹಲವು ಗಣ್ಯರು ಭಾಗವಹಿಸುವರು.
ಈ ಸಮಾರಂಭದಲ್ಲಿ ಭರತನಾಟ್ಯ, ಜಾನಪದ ನೃತ್ಯ, ಯಕ್ಷಗಾನ, ಸಾಂಪ್ರದಾಯಿಕ ಹಾಡುಗಳು ಮತ್ತು ಹಾಸ್ಯ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ ಎಂದು ಯುಎಇ ಒಕ್ಕಲಿಗರ ಸಂಘ ‘‘ನುಡಿಕರ್ನಾಟಕ.ಕಾಂ”ಗೆ ಪ್ರಕಟಣೆಯಲ್ಲಿ ತಿಳಿಸಿದೆ.