Friday, September 20, 2024

ಪ್ರಾಯೋಗಿಕ ಆವೃತ್ತಿ

ಮಳವಳ್ಳಿ| ವಸತಿ ಶಾಲೆಗೆ ಹೆಚ್ಚುವರಿ ಕೊಠಡಿ ; ನರೇಂದ್ರಸ್ವಾಮಿ

ಹೆಣ್ಣುಮಕ್ಕಳ ವಿದ್ಯಾಭ್ಯಾಸದ ದೃಷ್ಠಿಯಿಂದ ವಸತಿಯಲ್ಲಿ ಪದವಿ ಪೂರ್ವ ಕಾಲೇಜು ಪ್ರಾರಂಭಿಸಲು ಅನುಮೋದನೆ ಪಡೆಯುವುದಾಗಿ ಶಾಸಕ ನರೇಂದ್ರಸ್ವಾಮಿ ಭರವಸೆ ನೀಡಿದರು.

ಮಳವಳ್ಳಿ ತಾಲ್ಲೂಕಿನ ವಡ್ಡರಹಳ್ಳಿ ಗ್ರಾಮದ ಕಿತ್ತೂರುರಾಣಿ ಚೆನ್ನಮ್ಮ ವಸತಿ ಶಾಲೆಯ ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಶಾಲೆಗೆ ಬೇಕಾದ ಹೆಚ್ಚುವರಿ ಕೊಠಡಿ ಹಾಗೂ ಮೂಲಭೂತ ಸೌಕರ್ಯಗಳನ್ನು ಒದಗಿಸಲಾಗುವುದು ಎಂದರು.

ಶಾಲಾ ಮಕ್ಕಳು ನೃತ್ಯ ಮಾಡುವ ಮೂಲಕ ರಂಜಿಸಿದರು. ಇದೇ ವೇಳೆ ಶಾಲೆಯಲ್ಲಿ ಕಳೆದ 4 ವರ್ಷಗಳಿಂದ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಸನ್ಮಾನಿಸಲಾಯಿತು.

ಕಾರ್ಯಕ್ರಮದಲ್ಲಿ ಜಂಟಿ ನಿರ್ದೇಶಕ ಸಿದ್ದಲಿಂಗೇಶ್ ಬೇವಿನಮಟ್ಟಿ, ಪ್ರಾಂಶುಪಾಲ ಶಿವಕುಮಾರ, ಬಿಇಒ ಚಂದ್ರಪಾಟೀಲ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ದೇವರಾಜು, ತಾ.ಪ. ಮಾಜಿ ಅಧ್ಯಕ್ಷ ವಿಶ್ವಾಸ್, ಪುಟ್ಟಸ್ವಾಮಿ, ಬಂಕ್ ಮಹದೇವು, ಸಿ.ಪಿ ರಾಜು, ಲೋಹಿತ್ ಸೇರಿದಂತೆ ಹಲವರು ಇದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!