Thursday, September 19, 2024

ಪ್ರಾಯೋಗಿಕ ಆವೃತ್ತಿ

ಲೋಕಾಯುಕ್ತ ದಾಳಿ : ಸಾಕ್ಷಿ ಸಮೇತ ಸಿಕ್ಕಿಬಿದ್ದ ಪ್ರಥಮ ದರ್ಜೆ ಸಹಾಯಕಿ

ಕೊಡಗು ಜಿಲ್ಲೆ ಮಡಿಕೇರಿಯಲ್ಲಿ ಜಿಲ್ಲಾ ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಯ ಪ್ರಥಮ ದರ್ಜೆ ಸಹಾಯಕಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಸಾಕ್ಷಿ ಸಮೇತ ಲೋಕಾಯುಕ್ತರ ಬಲೆಗೆ ಸಿಕ್ಕಿಬಿದ್ದಿದ್ದಾರೆ.

ಇಲಾಖೆಯಲ್ಲಿ ಎಫ್‌ಡಿಎ ನೌಕರರಾಗಿದ್ದ ಲತಾ, ಕಾರಿಗೆ ಸಬ್ಸಿಡಿ ಮಂಜುರಾತಿಗೆ ಶೇ.10ರಷ್ಟು ಲಂಚಕ್ಕೆ ಬೇಡಿಕೆ ಇಟ್ಟಿದ್ದರು ಎಂದು ಆರೋಪ ಕೇಳಿ ಬಂದಿತ್ತು. ಈ ಸಂಬಂಧ ಲತೀಫ್ ಎಂಬುವವರು ಲೋಕಾಯುಕ್ತಕ್ಕೆ ದೂರು ನೀಡಿದ್ದರು.

ದೂರಿನನ್ವಯ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, ಲಂಚ ಪಡೆಯುವಾಗ ಲತಾ ಅವರನ್ನು ರೆಡ್‌ಹ್ಯಾಂಡ್‌ಆಗಿ ಹಿಡಿದಿದ್ದಾರೆ. ಲತಾ ಅವರನ್ನು ವಶಕ್ಕೆ ಪಡೆದಿದ್ದಾರೆ.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!