Thursday, September 19, 2024

ಪ್ರಾಯೋಗಿಕ ಆವೃತ್ತಿ

ಕೆ.ಟಿ.ಎಸ್ ಜನ್ಮದಿನಾಚರಣೆ

ಮಂಡ್ಯ ನಗರದಲ್ಲಿರುವ ಶಿವನಂಜಪ್ಪ ಉದ್ಯಾನವನದಲ್ಲಿ ದೇವರಕಾಡು ಬಳಗ ಮತ್ತು ಕೆ.ಟಿ.ಎಸ್ ಗ್ರೂಫ್ ಆಯೋಜಿಸಿದ್ದ ಸಮಾರಂಭದಲ್ಲಿ ವಿಧಾನ ಪರಿಷತ್ ಸದಸ್ಯ ಕೆ.ಟಿ.ಶ್ರೀಕಂಠೇಗೌಡ ಅವರ ಜನ್ಮದಿನ ಆಚರಿಸಲಾಯಿತು.

ಎರಡನೇ ಬಾರಿ ವಿಧಾನ ಪರಿಷತ್ ಸದಸ್ಯರಾಗಿರುವ ಕೆ.ಟಿ.ಶ್ರೀಕಂಠೇಗೌಡ ಅವರು ತಮ್ಮ ಸರಳತೆಯಿಂದ ಜನಮಾನಸದಲ್ಲಿ ನೆಲೆಸಿದ್ದಾರೆ. ವಿಧಾನ ಪರಿಷತ್ ಸದಸ್ಯರಾಗಿ ಸದನದ ಒಳಗೆ ಮತ್ತು ಹೊರಗೆ ಪದವೀಧರರ ಸಮಸ್ಯೆಗಳ ಬಗ್ಗೆ ದನಿಯೆತ್ತಿದ್ದಾರೆ.

ಅಲ್ಲದೆ ಮಂಡ್ಯ, ಮೈಸೂರು, ಹಾಸನ,ಚಾಮರಾಜನಗರ ಭಾಗದಲ್ಲಿ ತಮ್ಮ ಅನುದಾನ ನೀಡಿ ಅಭಿವೃದ್ಧಿ ಕೆಲಸಗಳನ್ನು ಮಾಡಿಸಿದ್ದಾರೆ. ಮಂಡ್ಯ ಕ್ಷೇತ್ರದ ವ್ಯಾಪ್ತಿಯಲ್ಲಿರುವ ಮೈಷುಗರ್ ಕಾರ್ಖಾನೆ, ರೈತರ ಸಾಲ ಮನ್ನಾ ಮೊದಲಾದ ಸಮಸ್ಯೆಗಳು ಸೇರಿದಂತೆ ಹಲವು ವಿಚಾರಗಳ ಬಗ್ಗೆ ಹೋರಾಟ ರೂಪಿಸಿರುವ ಕೆ.ಟಿ.ಶ್ರೀಕಂಠೇಗೌಡರಿಗೆ ದೇವರು ಆರೋಗ್ಯ ಭಾಗ್ಯ ನೀಡಲಿ ಎಂದು ಅಭಿಮಾನಿಗಳು ಶುಭ ಕೋರಿದರು.

ಈ ಸಂದರ್ಭದಲ್ಲಿ ನಗರಸಭೆಯ ಪೌರಕಾರ್ಮಿಕರಿಗೆ ಅಭಿನಂದನೆ ಸಲ್ಲಿಸಲಾಯಿತು. ವಿವಿಧ ಸೇವಾ ಕಾರ್ಯಗಳು ನಡೆಯಿತು. ಕಾರ್ಯಕ್ರಮದಲ್ಲಿ ದಕ್ಷಿಣ ಪದವೀಧರ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಹೆಚ್.ಕೆ.ರಾಮು ಶುಭಕೋರಿ ಸಿಹಿ ತಿನಿಸಿದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!