Wednesday, October 23, 2024

ಪ್ರಾಯೋಗಿಕ ಆವೃತ್ತಿ

ಜು.15ಕ್ಕೆ ಕೆ.ವಿ.ಶಂಕರಗೌಡ – ಕೆ.ಎಸ್.ಸಚ್ಚಿದಾನಂದ ಪ್ರಶಸ್ತಿಗಳ ಪ್ರದಾನ

ರಾಜ್ಯಮಟ್ಟದ ಕೆ.ವಿ.ಶಂಕರಗೌಡ ಮತ್ತು ಕೆ.ಎಸ್.ಸಚ್ಚಿದಾನಂದ ರಂಗಭೂಮಿ ಪ್ರಶಸ್ತಿಯನ್ನು ರಂಗಕರ್ಮಿ ಪ್ರಸನ್ನ ಹಾಗೂ ಸಮಾಜ ಸೇವಾ ಪ್ರಶಸ್ತಿಯನ್ನು ಬನ್ನೇರುಘಟ್ಟ ಜೈವಿಕ ಉದ್ಯಾನವನ ಮೃಗಾಲಯ ಆಸ್ಪತ್ರೆ, ಪ್ರಾಣಿ ಪಕ್ಷಗಳ ಆರೋಗ್ಯ ಮತ್ತು ಕಲ್ಯಾಣ ವಿಭಾಗಕ್ಕೆ ನೀಡಲಾಗುತ್ತಿದೆ ಎಂದು ಜನತಾ ಶಿಕ್ಷಣ ಟ್ರಸ್ಟ್ ಸದಸ್ಯ ಡಾ.ರಾಮಲಿಂಗಯ್ಯ ತಿಳಿಸಿದರು.

ಜಾಹೀರಾತು

ಮಂಡ್ಯದಲ್ಲಿ ಸುದ್ದಿಗೋ‍ಷ್ಠಿಯಲ್ಲಿ ಮಾತನಾಡಿದ ಅವರು, ಜು.15ರಂದು ಬೆಳಿಗ್ಗೆ 11ಕ್ಕೆ ನಗರದ ಪಿಇಎಸ್ ಇಂಜಿನಿಯರಿಂಗ್ ಕಾಲೇಜಿನ ನಿತ್ಯ ಸಚಿವ ಕೆ.ವಿ.ಶಂಕರಗೌಡ ತರಬೇತಿ ಮತ್ತು ಉದ್ಯೋಗ ಕೇಂದ್ರ ಸಭಾಂಗಣದಲ್ಲಿ ಜನತಾ ಶಿಕ್ಷಣ ಟ್ರಸ್ಟ್ ವತಿಯಿಂದ ನಿತ್ಯ ಸಚಿವ ಕೆ.ವಿ.ಶಂಕರಗೌಡರ 108ನೇ ಜನ್ಮದಿನಾಚರಣೆ, ೨೦೨೩ನೇ ಸಾಲಿನ ರಾಜ್ಯ ಮಟ್ಟದ ಕೆ.ವಿ.ಶಂಕರಗೌಡ ಮತ್ತು ಕೆ.ಎಸ್.ಸಚ್ಚಿದಾನಂದ ರಂಗಭೂಮಿ ಮತ್ತು ಸಮಾಜಸೇವಾ ಪ್ರಶಸ್ತಿಗಳ ಪ್ರದಾನ ಸಮಾರಂಭದಲ್ಲಿ ಪ್ರದಾನ ಮಾಡಲಾಗುವುದು ಎಂದರು.

ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾದ ಅಧ್ಯಕ್ಷ ಅಶೋಕ್ ಹಾರನಹಳ್ಳಿ ಸಮಾರಂಭ ಉದ್ಘಾಟಿಸಿ ಪ್ರಶಸ್ತಿ ಪ್ರದಾನ ಮಾಡುವರು. ಜನತಾ ಶಿಕ್ಷಣ ಟ್ರಸ್ಟ್ ಅಧ್ಯಕ್ಷ ಕೆ.ಎಸ್.ವಿಜಯ್ ಆನಂದ್ ಅಧ್ಯಕ್ಷತೆ ವಹಿಸುವರು. ಕಾರ್ಯದರ್ಶಿ ಎಸ್.ಎಲ್.ಶಿವಪ್ರಸಾದ್ ಉಪಸ್ಥಿತರಿರುವರು ಎಂದರು.

ಗೋಷ್ಠಿಯಲ್ಲಿ ಟ್ರಸ್ಟ್ನ ಕಾರ್ಯದರ್ಶಿ ಎಸ್.ಎಲ್.ಶಿವಪ್ರಸಾದ್, ಉಪಾಧ್ಯಕ್ಷ ಎಂ.ಬಿ.ಶ್ರೀಧರ್ ಇದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!