ಪ್ರಧಾನಿ ನರೇಂದ್ರ ಮೋದಿಯವರು ರೈತರು, ಕೂಲಿ ಕಾರ್ಮಿಕರಿಗೆ ನೀಡಿದ ಉತ್ತಮ ಕೊಡುಗೆಗಳನ್ನು ಮೆಚ್ಚಿ ವಿವಿಧ ಪಕ್ಷಗಳ ಮುಖಂಡರು ಬಿಜೆಪಿ ಪಕ್ಷ ಸೇರಲಿದ್ದಾರೆ ಎಂದು ಶ್ರೀರಂಗಪಟ್ಟಣ ತಾಲೂಕು ಮಂಡಲ ಅಧ್ಯಕ್ಷ ಪೀಹಳ್ಳಿ ರಮೇಶ್ ಹೇಳಿದರು.
ಶ್ರೀರಂಗಪಟ್ಟಣದಲ್ಲಿ ಪತ್ರಿಕಾ ಗೋಷ್ಠಿ ನಡೆಸಿ ಮಾತನಾಡಿದ ಅವರು, ಮೇ.14ರ ಶನಿವಾರ ಮಧ್ಯಾಹ್ನ 1 ಗಂಟೆಗೆ ಪಟ್ಟಣದ ಖಾಸಗಿ ಬಸ್ ನಿಲ್ದಾಣದಲ್ಲಿ ಬಿಜೆಪಿ ಕಾರ್ಯಕರ್ತರ ಸಮಾವೇಶ ಮತ್ತು ಪಕ್ಷ ಸೇರ್ಪಡೆ ಕಾರ್ಯಕ್ರಮ ನಡೆಯಲಿದೆ.
ಜಿಲ್ಲಾ ಉಸ್ತುವಾರಿ ಸಚಿವ ಗೋಪಾಲಯ್ಯ, ಸಚಿವ ನಾರಾಯಣಗೌಡ ಸೇರಿದಂತೆ ಪಕ್ಷದ ರಾಜ್ಯ ಮಟ್ಟದ ನಾಯಕರು, ಜಿಲ್ಲಾ ನಾಯಕರುಗಳು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಇದೇ ವೇಳೆ ತಾಲೂಕಿನ ವಿವಿಧ ಪಕ್ಷಗಳ, ವಿವಿಧ ಗ್ರಾಮಗಳ ಮುಖಂಡರು ಹಾಗೂ ನೂರಾರು ಯುವಕರು ಬಿಜೆಪಿ ಪಕ್ಷದ ಸಿದ್ದಾಂತವನ್ನು ಮೆಚ್ಚಿ ಪಕ್ಷ ಸೇರ್ಪಡೆಗೊಳ್ಳಲಿದ್ದಾರೆ ಎಂದರು.
ಗೋಷ್ಠಿಯಲ್ಲಿ ತಾಲೂಕು ಬಿಜೆಪಿ ಪ್ರಧಾನ ಕಾರ್ಯದರ್ಶಿ ಬಿ.ಸಿ ಸಂತೋಷ್ ಕುಮಾರ್, ನಂದೀಶ್, ನಗರಾಧ್ಯಕ್ಷ ಹೇಮಂತ್ಕುಮಾರ್, ತಾಲೂಕು ಉಪಾಧ್ಯಕ್ಷ ಚಂದ್ರು, ಯುವ ಮೋರ್ಚ ಅಧ್ಯಕ್ಷ ಸುನೀಲ್ ಕುಮಾರ್ ಇದ್ದರು.
ಇದನ್ನು ಓದಿ: ಎ.ಸಿ.ಶ್ರೀಕಂಠಯ್ಯ ಸ್ಮರಣಾರ್ಥ ಹಣ್ಣು-ಹಂಪಲು ವಿತರಣೆ