ಮುಖ್ಯಮಂತ್ರಿಗಳು ಇದೇ ತಿಂಗಳ ಸೆಪ್ಟೆಂಬರ್ 09 ಅಥವಾ 10 ರಂದು ಮೈಷುಗರ್ ಕಾರ್ಖಾನೆಯ ಪುನರಾರಂಭ ಕಾರ್ಯಕ್ರಮಕ್ಕೆ ಆಗಮಿಸಲಿದ್ದು, ಅಂದು ಜಿಲ್ಲೆಯ ಎಲ್ಲಾ ಜನಪ್ರತಿನಿಧಿಗಳನ್ನು ಒಳಗೊಂಡ ಪ್ರಗತಿ ಪರಿಶೀಲನಾ ಸಭೆ ನಡೆಸಲಿ ಎಂದು ವಿಧಾನ ಪರಿಷತ್ ಸದಸ್ಯರಾದ ದಿನೇಶ್ ಗೂಳೀಗೌಡ ಹಾಗೂ ಮಧು ಮಾದೇಗೌಡ ಇಂದು ಮೈಷುಗರ್ ಆವರಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಕೆ.ಗೋಪಾಲಯ್ಯ ಅವರಿಗೆ ಮನವಿ ಸಲ್ಲಿಸಿದರು.
ಜಿಲ್ಲೆಯ ಅಭಿವೃದ್ಧಿಯ ಜೊತೆಗೆ ಕಳೆದ 3 ತಿಂಗಳಿಂದ ಭಾರೀ ಮಳೆಯಿಂದ ಜಿಲ್ಲೆಯಲ್ಲಿ ಉಂಟಾಗಿರುವ ರೈತರ ಬೆಳೆಗಳ ನಷ್ಟ, ರಸ್ತೆಗಳು, ಶಾಲಾ ಕಟ್ಟಡಗಳು, ಕೆರೆಗಳು, ಅಂಗನವಾಡಿ ಕಟ್ಟಡಗಳು ಸೇರಿದಂತೆ ಜಿಲ್ಲೆಯಲ್ಲಿ ಉಂಟಾಗಿರುವ ನಷ್ಟಗಳ ಬಗ್ಗೆ ಚರ್ಚೆ ನಡೆಸುವುದು ಅವಶ್ಯಕವಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಮನವಿ ಪತ್ರದ ಮೂಲಕ ವಿವರಿಸಿದ್ದಾರೆ.
ತಾವು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಭೇಟಿಯ ಸಂದರ್ಭದಲ್ಲಿ ಜಿಲ್ಲೆಯ ಸಚಿವರು, ಸಂಸದರು, ಶಾಸಕರು ಹಾಗೂ ಜನಪ್ರತಿನಿಧಿಗಳ ಸಭೆ ಕರೆದು ಚರ್ಚೆ ನಡೆಸಬೇಕೆಂದು ಸಚಿವ ಗೋಪಾಲಯ್ಯ ಅವರನ್ನು ಒತ್ತಾಯಿಸಿದ್ದಾರೆ.