ಮಂಡ್ಯ ತಾಲ್ಲೂಕಿನ ದೊಡ್ಡಗರುಡನಹಳ್ಳಿ ಸೊಸೈಟಿಯಲ್ಲಿ ಎಲ್ಲಾ ನಿರ್ದೇಶಕರ ಜೊತೆಗೂಡಿ ರೈತರಿಗೆ ಅನುಕೂಲ ಆಗುವ ನಿಟ್ಟಿನಲ್ಲಿ, ರೈತರಿಗೆ ಗೊಬ್ಬರ ಸೇರಿದಂತೆ ರೈತರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಕೆಲಸ ಮಾಡುವಂತೆ ಶಾಸಕ ರವಿಕುಮಾರ್ ಗಣಿಗ ಸಲಹೆ ನೀಡಿದರು.
ಮಂಡ್ಯ ತಾಲೂಕಿನ ದೊಡ್ಡಗರುಡನಹಳ್ಳಿ ವ್ಯವಸಾಯ ಸೇವಾ ಸಹಕಾರ ಸಂಘಕ್ಕೆ ನೂತನವಾಗಿ ಅಧ್ಯಕ್ಷರಾಗಿ ಆಯ್ಕೆಯಾದ ಮಾಯಪ್ಪನಹಳ್ಳಿ ಎಂ.ಸಿ.ಚಂದ್ರು ಅವರಿಂದ ಅಭಿನಂದನೆ ಸ್ವೀಕರಿಸಿ ಅವರು ಮಾತನಾಡಿದರು.
ಇದೇ ಸಂದರ್ಭದಲ್ಲಿ ಮನ್ ಮುಲ್ ನಿರ್ದೇಶಕ ಉಮ್ಮಡಹಳ್ಳಿ ಶಿವಪ್ಪ, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ
ಜಿ.ಸಿ.ಆನಂದ್,ತಾಲೂಕು ಪಂಚಾಯಿತಿ ಮಾಜಿ ಸದಸ್ಯ ಚಿಕ್ಕಬಳ್ಳಿ ಕೃಷ್ಣ ಸೇರಿದಂತೆ ಮತ್ತಿತರರನ್ನು ಭೇಟಿ ಮಾಡಿ ಎಂ.ಸಿ.ಚಂದ್ರು ಅವರು ಅಭಿನಂದಿಸಿದರು.
ಎಪಿಎಂಸಿ ಮಾಜಿ ನಿರ್ದೇಶಕ ಎಂ.ಸಿ.ಕುಮಾರ್,ತಾಲೂಕು ಪಂಚಾಯಿತಿ ಮಾಜಿ ಸದಸ್ಯ ಪ್ರಶಾಂತಬಾಬು, ಕಾಂಗ್ರೆಸ್ ಮುಖಂಡರಾದ ಚಂದ್ರಶೇಖರ್, ಉಮೇಶ್, ದೊರೆಸ್ವಾಮಿ ಸೇರಿದಂತೆ ಮತ್ತಿತರರು ಹಾಜರಿದ್ದರು.