Friday, October 18, 2024

ಪ್ರಾಯೋಗಿಕ ಆವೃತ್ತಿ

ಪಾಂಡವಪುರ : ಕೊಲೆ ಆರೋಪಿಗೆ ಜೀವಾವಧಿ ಶಿಕ್ಷೆ

ಪಾಂಡವಪುರ ಟೌನ್ ನ ಗ್ರೀನ್ ಪಾರ್ಕ್ ಹೊಟೇಲ್‌ನಲ್ಲಿ ಸಪ್ಲೇಯರ್ ಕೆಲಸ ಮಾಡುತ್ತಿದ್ದ ಮಂಜುನಾಥ್ ಅಲಿಯಾಸ್ ಮಂಜ ಎಂಬಾತನನ್ನು ಕೊಲೆ ಮಾಡಿದ್ದ ಕೃಷ್ಣ ಅಲಿಯಾಸ್ ರವಿ ಎಂಬುವನಿಗೆ ನ್ಯಾಯಾಲಯವು ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.

ಅದೇ ಹೊಟೇಲ್‌ನಲ್ಲಿ ಸಪ್ಲೇಯರ್ ಕೆಲಸ ಮಾಡುತ್ತಿದ್ದ ಕೃಷ್ಣ ಹಾಗೂ ಮಂಜುನಾಥ್ ಇಬ್ಬರ ನಡುವೆ ಟಿಪ್ಸ್ ಪಡೆಯುವ ವಿಚಾರಕ್ಕೆ ಆಗಾಗ್ಗೆ ಗಲಾಟೆ ನಡೆಯುತಿತ್ತು.

ಇದರಿಂದ ಆರೋಪಿ ಕೃಷ್ಣ @ ರವಿ, ಮಂಜುನಾಥನನ್ನು ಕೊಲೆ ಮಾಡುವ ಉದ್ದೇಶದಿಂದ ಹೊಟೇಲ್‌ನಲ್ಲಿ ಇದ್ದ ತರಕಾರಿ ಕತ್ತರಿಸುವ ಚಾಕುವನ್ನು ತೆಗೆದುಕೊಂಡು ದಿನಾಂಕ:03.10.2022 ರಂದು ರಾತ್ರಿ ಸುಮಾರು 11.00 ಗಂಟೆಯಲ್ಲಿ ಆರೋಪಿ ಕೃಷ್ಣ @ ರವಿಯು, ಮಂಜುನಾಥನ ಕುತ್ತಿಗೆಯನ್ನು ಕ್ಯುಯ್ದು ಕೊಲೆ ಮಾಡಿದ್ದ. ಈ ಬಗ್ಗೆ ಪಾಂಡವಪುರ ಪೊಲೀಸ್ ಠಾಣೆಯಲ್ಲಿ ಕೇಸು ದಾಖಲಾಗಿತ್ತು. ಇದರ ತನಿಖೆ ಕೈಗೊಂಡ ಪಾಂಡವಪುರ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ವಿವೇಕಾನಂದ ಹೆಚ್. ಆರ್ ಆರೋಪಿ ಕೃಷ್ಣ @ ರವಿಯ ಮೇಲೆ ನ್ಯಾಯಾಲಯಕ್ಕೆ ದೋಷರೋಪಣಾ ಪತ್ರವನ್ನು ಸಲ್ಲಿಸಿದ್ದರು.

ಇದರ ವಿಚಾರಣೆ ನಡೆಸಿದ ಶ್ರೀರಂಗಪಟ್ಟಣದ 3 ನೇ ಅಪರ ಜಿಲ್ಲಾ ಸತ್ರ ನ್ಯಾಯಾಲಯವು ಆರೋಪಿಗೆ ಜೀವಾವಧಿ ಶಿಕ್ಷೆ ಹಾಗೂ 5000/- ರೂ ದಂಡವನ್ನು ವಿಧಿಸಿ ತೀರ್ಪು ಪ್ರಕಟಿಸಿದೆ.

ಸರ್ಕಾರಿ ಅಭಿಯೋಜಕರಾಗಿ ಶ ಪ್ರಫುಲ್ಲಾ ಎಂ. ಕೆ ವಾದ ಮಂಡಿಸಿದ್ದರು.

ಪಾಂಡವಪುರ ಪೊಲೀಸ್ ಠಾಣಾ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂಧಿಯವರ ಈ ಕಾರ್ಯವನ್ನು ಮಂಡ್ಯ ಜಿಲ್ಲಾ ಪೊಲೀಸ್ ಅಧೀಕ್ಷಕರು ಶ್ಲಾಘಿಸಿ ಪ್ರಶಂಸಿಸಿದ್ದಾರೆ.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!