Saturday, May 4, 2024

ಪ್ರಾಯೋಗಿಕ ಆವೃತ್ತಿ

ಜೀವನವೇ ಮುಖ್ಯ.. ತಂಬಾಕಲ್ಲ

ಜಿಲ್ಲೆಯಾದ್ಯಂತ ತಂಬಾಕು ನಿಯಂತ್ರಣವನ್ನು ಪರಿಣಾಮಕಾರಿಯಾಗಿ ಅನುಷ್ಠಾನ ಗೊಳಿಸಲು ನಿಯಮಬಾಹಿರವಾಗಿ ತಂಬಾಕು ಉತ್ಪನ್ನಗಳ ಮಾರಾಟ ಹಾಗೂ ಬಳಕೆಯಲ್ಲಿ ತೊಡಗಿದ್ದವರಿಗೆ ಜಿಲ್ಲಾ ಸರ್ವೇಕ್ಷಣಾಧಿಕಾರಿಗಳ ಮಾರ್ಗದರ್ಶನದಲ್ಲಿ ಕೋಟ್ಪಾ ಕಾರ್ಯಾಚರಣೆ ನಡೆಸಲಾಯಿತು.

ಮಂಡ್ಯ ನಗರ ವ್ಯಾಪ್ತಿಯಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಸೆಕ್ಷನ್ 4 ರ ಅಡಿಯಲ್ಲಿ 22 ಪ್ರಕರಣ ದಾಖಲಿಸಿ ರೂ. 2350/- ದಂಡ ಹಾಗೂ ಸೆಕ್ಷನ್ 6b ಅಡಿಯಲ್ಲಿ 12 ಪ್ರಕರಣ ದಾಖಲಿಸಿ ರೂ. 1700/- ದಂಡ ಒಟ್ಟಾರೆಯಾಗಿ 34 ಪ್ರಕರಣ ದಾಖಲಿಸಿ 4050/- ದಂಡ ವಿಧಿಸಲಾಯಿತು.

ಇದೇ ಸಂದರ್ಭದಲ್ಲಿ ಸಾರ್ವಜನಿಕರಿಗೆ ಕರಪತ್ರಗಳನ್ನು ವಿತರಿಸಿ ಕೋಟ್ಪಾ ಕಾಯಿದೆ ಹಾಗೂ ಟಿಸಿಸಿಯ ಉಚಿತ ಸೇವಾ ಸೌಲಭ್ಯಗಳ ಬಗ್ಗೆ ಅರಿವು ನೀಡಲಾಯಿತು.

ಇಂದಿನ ಕಾರ್ಯಾಚರಣೆಯಲ್ಲಿ ಜಿಲ್ಲಾ ಸಲಹೆಗಾರರಾದ ತಿಮ್ಮರಾಜು, ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿಗಳಾದ ಮಂಗಳಾ ಹಾಗೂ ಸಮಾಜಕಾರ್ಯಕರ್ತರಾದ ಮೋಹನ್ ಕುಮಾರ್ ಹಾಜರಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!