ಮಳವಳ್ಳಿ ತಾಲ್ಲೂಕಿನ ಕಿರುಗಾವಲು ಹೋಬಳಿಯ ಕುರಿ ಮತ್ತು ಉಣ್ಣೆ ಉತ್ಪಾದಕರ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಶೆಟ್ಟಹಳ್ಳಿ ಗ್ರಾಮದ ಲಿಂಗರಾಜು, ಉಪಾಧ್ಯಕ್ಷರಾಗಿ ಸಿ.ಜ್ಯೋತಿಮಣಿ ಅವಿರೋಧವಾಗಿ ಆಯ್ಕೆಯಾದರು.
ಆಡಳಿತ ಮಂಡಳಿಯ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ತಲಾ ಒಂದು ನಾಮಪತ್ರ ಸಲ್ಲಿಕೆ ಮಾಡಿದ್ದರಿಂದ ಅಧ್ಯಕ್ಷ- ಉಪಾಧ್ಯಕ್ಷರ ಅವಿರೋಧ ಆಯ್ಕೆಯನ್ನು ಚುನಾವಣಾ ಅಧಿಕಾರಿ ರಾಮಕೃಷ್ಣ ಘೋಷಣೆ ಮಾಡಿದರು.
ನೂತನ ಅಧ್ಯಕ್ಷರಿಗೆ ಮತ್ತು ಉಪಾಧ್ಯಕ್ಷರನ್ನು ಸನ್ಮಾನಿಸಿ, ಮಾತನಾಡಿದ ಕುರುಬರ ಸಂಘದ ರಾಜ್ಯ ನಿರ್ದೇಶಕ ಬಿ. ಪುಟ್ಟಬಸವಯ್ಯ, ವಿಶ್ವ ಪ್ರಸಿದ್ದಿ ಪಡೆದಿರುವ ಶುದ್ದ ಬಂಡೂರು ತಳಿಯನ್ನು ಸಂರಕ್ಷಿಸಿ ಅಭಿವೃದ್ಧಿಗೊಳಿಸುವ ಹಿನ್ನೆಲೆಯಲ್ಲಿ ಸಹಕಾರ ಸಂಘವನ್ನು ಸ್ಥಾಪಿಸಿದ್ದು ಕುಂಠಿತಗೊಂಡಿರುವ ಬಂಡೂರು ತಳಿಯ ಕುರಿಗಳನ್ನು ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಈ ಸಂಘ ಕಾರ್ಯವನ್ನು ನಿರ್ವಹಿಸುತ್ತದೆ ಎಂದು ತಿಳಿಸಿದರು
ಸರ್ಕಾರದ ಗ್ಯಾರಂಟಿಗಳ ಜಿಲ್ಲಾ ಅಧ್ಯಕ್ಷ ಚಿಕ್ಕಲಿಂಗಯ್ಯ ಮಾತನಾಡಿದರು. ನಿರ್ದೇಶಕರಾದ ಈರಮಾದಯ್ಯ ನಾಗರಾಜು, ಬಿ.ಪುಟ್ಟಬಸವಯ್ಯ, ಮಹದೇವಯ್ಯ, ಮಹಲಿಂಗು, ರುದ್ರಯ್ಯ, ಶ್ರೀನಿವಾಸ್, ಮಂಟೇಲಿಂಗಯ್ಯ ಸೌಭಾಗ್ಯ, ಶಶಿಧರ್ ಸೇರಿದಂತೆ ಇತರರು ಉಪಸ್ಥಿತರಿದ್ದರು.