ಕನ್ನಡ ಸಾಹಿತ್ಯ ಪರಿಷತ್ತು ಜ.4ರಂದು ಆಯೋಜಿಸಲಿರುವ ನಗರ 5ನೇ ಕನ್ನಡ ಸಾಹಿತ್ಯ ಸಮ್ಮೇಳನದ ಪ್ರಚಾರ ವಾಹನಕ್ಕೆ ಸೋಮವಾರ ಜಿಲ್ಲಾಧಿಕಾರಿ ಡಾ.ಎಚ್.ಎನ್.ಗೋಪಾಲಕೃಷ್ಣ ಬಾವುಟ ಬೀಸುವ ಮೂಲಕ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ಡಾ.ಎಚ್.ಎನ್.ಗೋಪಾಲಕೃಷ್ಣ, ನಗರದಲ್ಲಿ ನಡೆಯುವ ಸಾಹಿತ್ಯ ಸಮ್ಮೇಳನಕ್ಕೆ ಹೆಚ್ಚಿನ ಸಂಖ್ಯೆಯ ಸಾಹಿತ್ಯಾಸಕ್ತರು ಮತ್ತು ನಾಗರೀಕರು ಪಾಲ್ಗೊಂಡು ಸಾಹಿತ್ಯ, ಸಂಗೀತ ಆಲಿಸಿ, ಆರೋಗ್ಯ ಮತ್ತು ಸರ್ಕಾರಿ ಸೇವೆಗಳನ್ನು ಸದುಪಯೋಗಪಡಿಸಿಕೊಳ್ಳಿ ಎಂದು ನುಡಿದರು.
ಸ್ವಾಗತ ಸಮಿತಿ ಅಧ್ಯಕ್ಷ ಅಶೋಕ್ಜಯರಾಂ ಮಾತನಾಡಿ, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ನಗರ ಘಟಕ ಆಯೋಜಿಸಿರುವ ನಗರ 5ನೇ ಕನ್ನಡ ಸಾಹಿತ್ಯ ಸಮ್ಮೇಳನದ ಯಶಸ್ಸಿಗೆ ಎಲ್ಲಾ ಸಿದ್ದತೆ ನಡೆಯುತ್ತಿದೆ, ಜಿಲ್ಲೆಯ ಮತ್ತು ನಗರ ವ್ಯಾಪ್ತಿಯಲ್ಲಿನ ಸಾಹಿತಿಗಳು, ನಾಗರೀಕರು, ಮುಖ್ಯವಾಗಿ ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಸೌಲಭ್ಯಗಳನ್ನು ಪಡೆದುಕೊಳ್ಳಬೇಕಿದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಕಸಾಪ ನಗರ ಘಟಕದ ಅಧ್ಯಕ್ಷೆ ಸುಜಾತಕೃಷ್ಣ, ಜಿಲ್ಲಾ ಕಸಾಪ ಕೋಶಾಧ್ಯಕ್ಷ ಬಿ ಎಂ ಅಪ್ಪಾಜಪ್ಪ, ಗೌರವ ಕಾರ್ಯದರ್ಶಿ ಜಿ ಧನಂಜಯ, ಒಕ್ಕಲಿಗ ಸಂಘದ ಯುವ ಘಟಕ ಅಧ್ಯಕ್ಷ ಹೊಸಹಳ್ಳಿ ಶಿವಲಿಂಗೇಗೌಡ, ಬಿ ಎಲ್ ಬೋರೇಗೌಡ, ನಾಗರಾಜು, ಅನಂತ ಪದ್ಮನಾಭ, ಶೋಭಾ, ಶಶಿಮಣಿ, ಭವಾನಿ ಮತ್ತಿತರರು ಉಪಸ್ಥಿತರಿದ್ದರು.