ಆದಾಯಕ್ಕೂ ಮೀರಿ ಅಕ್ರಮವಾಗಿ ಆಸ್ತಿ ಸಂಪಾದನೆ ಆರೋಪದ ಮೇಲೆ ನಿವೃತ್ತ ಇಇ ಎಸ್.ಶಿವರಾಜು ಅವರ ಮನೆ ಮೇಲೆ ಇಂದು ಮಂಡ್ಯ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ.
ಇಂದು ಬೆಳಿಗ್ಗೆ ಶಿವರಾಜು ಅವರ ಮಂಡ್ಯ ಹಾಗೂ ಮೈಸೂರಿನಲ್ಲಿರುವ ಮನೆಗಳ ಮೇಲೆ ದಾಳಿ ನಡೆಸಿದ ಲೋಕಾಯುಕ್ತ ಪೋಲಿಸರು ಪರಿಶೀಲನೆ ನಡೆಸಿದರು.
ಶಿವರಾಜು ಅವರ ಹುಟ್ಟೂರು ನಾಗಮಂಗಲ ತಾಲ್ಲೂಕಿನ ಇಜ್ಜಲಘಟ್ಟ ಗ್ರಾಮದಲ್ಲಿ ಮೂರು ಕಡೆ ಪರಿಶೀಲನೆ ನಡೆಸಿದರು.
ಮೈಸೂರಿನಲ್ಲಿಯೂ ಕೂಡ ಶಿವರಾಜು ಅವರ ಒಡೆತನದ ಎರಡು ಸ್ಥಳಗಳಲ್ಲಿ ದಾಳಿ ನಡೆಸಿದರು.
ಇಜ್ಜಲಘಟ್ಟದ ಫಾರ್ಮ್ ಹೌಸ್, ತಂದೆ ಮನೆ, ಕ್ರಷರ್ ಮೇಲೆ ದಾಳಿ ನಡೆಸಲಾಗಿದೆ.
ಮೈಸೂರಿನಲ್ಲಿ ಶಿವರಾಜು ಹಾಗೂ ಅಳಿಯನ ಮನೆ ಮೇಲೆಯೂ ದಾಳಿ ನಡೆಸಿ ಅಕ್ರಮ ಆಸ್ತಿ ಪತ್ತೆ ಮಾಡಿರುವ ಲೋಕಾಯುಕ್ತ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ.
ಲೋಕಾಯುಕ್ತ ಎಸ್ಪಿ ಸುರೇಶ್ ಬಾಬು ನೇತೃತ್ವದಲ್ಲಿ ಕಾರ್ಯಾಚರಣೆ ಇನ್ನೂ ಮುಂದುವರೆದಿದೆ.