ದಲಿತ ನಾಯಕ ಡಾ.ಎಂ.ಬಿ.ಶ್ರೀನಿವಾಸ್ ಅವರ ಪ್ರಥಮ ವರ್ಷದ ಪುಣ್ಯಸ್ಮರಣೆ ಅಂಗವಾಗಿ ಪಾಂಡವಪುರ ತಾಲೂಕಿನ ಮೇನಾಗರದಲ್ಲಿ ನ.22ರಂದು ಬೆಳಿಗ್ಗೆ 10.30ಗಂಟೆಗೆ ರಕ್ತದಾನ ಶಿಬಿರ ಹಮ್ಮಿಕೊಳ್ಳಲಾಗಿದೆ ಎಂದು ದಲಿತ ಮುಖಂಡ ಎಂ.ವಿ.ಕೃಷ್ಣ ತಿಳಿಸಿದರು.
ಮಂಡ್ಯದಲ್ಲಿ ಸುದ್ಧಿಗಾರರೊಂದಿಗೆ ಮಾತನಾಡಿದ ಅವರು, ಈ ಜೀವಧಾರೆ ಟ್ರಸ್ಟ್ ವತಿಯಿಂದ ನಡೆಯುವ ಶಿಬಿರದಲ್ಲಿ ಸುಮಾರು 60 ಮಂದಿ ರಕ್ತದಾನ ಮಾಡುವ ನಿರೀಕ್ಷೆ ಇದೆ, ಈ ಮೂಲಕ ಪ್ರಗತಿಪರ, ಜನಪರ ಹೋರಾಟಗಾರ ಎಂ.ಬಿ.ಶ್ರೀನಿವಾಸ್ ಅವರ ಹೆಸರನ್ನು ಚಿರಸ್ಥಾಯಿಯಾಗಿಸಲು ಮುಂದಾಗಿದ್ದೇವೆ ಎಂದರು.
ಈ ರಕ್ತದಾನ ಶಿಬಿರಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಆಸಕ್ತರು ಆಗಮಿಸಿ, ರಕ್ತದಾನ ಮಾಡುವ ಮೂಲಕ ನೊಂದವರಿಗೆ ನೆರವಾಗಬೇಕೆಂದು ಮನವಿ ಮಾಡಿದರು.
ಗೋಷ್ಠಿಯಲ್ಲಿ ಮುಖಂಡರಾದ ಯತೀಶ್, ಪವನ್, ಕೃಷ್ಣಪ್ಪ, ಶಿವಲಿಂಗಯ್ಯ, ಅಪ್ಪಾಜಪ್ಪ ಮತ್ತಿತರರಿದ್ದರು.