Thursday, September 19, 2024

ಪ್ರಾಯೋಗಿಕ ಆವೃತ್ತಿ

ಪೌರ ಕಾರ್ಮಿಕರನ್ನು ನೇಮಕ ಮಾಡಿಕೊಳ್ಳಲು ಎಂ.ಶಿವಣ್ಣ ತಾಕೀತು

ಪಾಂಡವಪುರ ಪುರಸಭೆಯಲ್ಲಿ ಅಗತ್ಯವಿರುವ ಪೌರಕಾರ್ಮಿಕರನ್ನು ಕೂಡಲೇ ನೇಮಕ ಮಾಡಿಕೊಳ್ಳಬೇಕು, ಅಲ್ಲದೆ ಕೆನ್ನಾಳು ಗ್ರಾಮ ಪಂಚಾಯಿತಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಪೌರಕಾರ್ಮಿಕರಾದ ಮಂಜುಳ ಅವರಿಗೆ 15 ದಿನಗಳ ಒಳಗಾಗಿ ಖಾಯಂ ನೇಮಕಾತಿ ಮಾಡಿಕೊಳ್ಳಬೇಕು ಎಂದು ಸಫಾಯಿ ಕರ್ಮಚಾರಿಗಳ ಆಯೋಗದ ಅಧ್ಯಕ್ಷ ಎಂ.ಶಿವಣ್ಣ ಅವರು ಇಓ ಲೋಕೇಶ್ ಮೂರ್ತಿಗೆ ತಾಕೀತು ಮಾಡಿದರು.

ಪಾಂಡವಪುರ ತಾ.ಪಂ.ಸಭಾಂಗಣದಲ್ಲಿ ಮಂಗಳವಾರ ನಡೆದ ಪುರಸಭಾ ಪೌರ ಕಾರ್ಮಿಕರು ಹಾಗೂ ತಾಲೂಕಿನ ಗ್ರಾಮ ಪಂಚಾಯಿತಿಗಳ ಪೌರ ಕಾರ್ಮಿಕರ ಕುಂದುಕೊರತೆಗಳ ಪರಿಶೀಲನಾ ಸಭೆ ನಡೆಸಿ ಅವರು ಮಾತನಾಡಿದರು.

ಕ್ಯಾತನಹಳ್ಳಿ ಗ್ರಾ.ಪಂ.ವ್ಯಾಪ್ತಿಯಲ್ಲಿ 8 ಜನ ಪೌರಕಾರ್ಮಿಕರು ಕೆಲಸ ನಿರ್ವಹಿಸುತ್ತಿದ್ದಾರೆ, ಮೇಲುಕೋಟೆ ಗ್ರಾ.ಪಂ. ವ್ಯಾಪ್ತಿಯಲ್ಲಿ ಒಬ್ಬರೆ ಪೌರಕಾರ್ಮಿಕರಿದ್ದಾರೆ. ಅದರೆ ಇದು ಪ್ರವಾಸಿ ತಾಣವಾಗಿರುವುದರಿಂದ ಹೆಚ್ಚಿನ ಪೌರಕಾರ್ಮಿಕರನ್ನು ನೇಮಕ ಮಾಡಿಕೊಳ್ಳುವಂತೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸುವಂತೆ ಸೂಚಿಸಿದರು.

ಸಭೆಯಲ್ಲಿ ನಗರ ಯೋಜನೆ ಇಲಾಖೆ ಜಿಲ್ಲಾ ಯೋಜ‌ನಾ ನಿರ್ದೇಶಕಿ ತುಷರ ರಾಣಿ, ಅಪ್ತ ಕಾರ್ಯದರ್ಶಿ ವಿಮಲಾ, ಆಪ್ತ ಸಹಾಯಕ ರಘು, ಸಫಾಯಿ ಕರ್ಮಚಾರಿ ಜಾಗೃತಿ ಸಮಿತಿ ಜಿಲ್ಲಾಧ್ಯಕ್ಷ ಕೃಷ್ಣ, ಇ ಒ ಲೋಕೇಶ್ ಮೂರ್ತಿ, ಪುರಸಭೆ ಅಧ್ಯಕ್ಷ ಮುಖ್ಯಾಧಿಕಾರಿ ವೀಣಾ, ಸಮಾಜ‌ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ರಾಘವೇಂದ್ರ ಇತರರಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!