Thursday, September 19, 2024

ಪ್ರಾಯೋಗಿಕ ಆವೃತ್ತಿ

ದಕ್ಷಿಣ ಶಿಕ್ಷಕರ ಕ್ಷೇತ್ರ| ಮರಿತಿಬ್ಬೇಗೌಡ ಪರ ಎಂ.ಶ್ರೀನಿವಾಸ್ ಪ್ರಚಾರ

ಜೂನ್.3 ರಂದು ನೆಡೆಯುವ ದಕ್ಷಿಣ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಮರಿತಿಬ್ಬೇಗೌಡರ ಪರ ಮಾಜಿ ಶಾಸಕ ಎಂ.ಶ್ರೀನಿವಾಸ್ ನೇತೃತ್ವದಲ್ಲಿ ಕಾಂಗ್ರೆಸ್ ಮುಖಂಡರು ವಿವಿಧ ಕಾಲೇಜುಗಳಿಗೆ ಭೇಟಿ ಮಾಡಿ ಚುನಾವಣೆ ಪ್ರಚಾರ ನೆಡೆಸಿದರು.

ಮಂಡ್ಯ ನಗರದ ಪೊಲೀಸ್ ಕಾಲೋನಿ ಸರ್ಕಾರಿ ಪದವಿ ಪೂರ್ವ ಕಾಲೇಜು, ಮಂಡ್ಯ ವಿಶ್ವವಿದ್ಯಾಲಯ,ಅಭಿನವ ಭಾರತಿ ವಿದ್ಯಾಕೇಂದ್ರ, ಸರ್ಕಾರಿ ಪದವಿ ಪೂರ್ವ ಕಾಲೇಜು ಮಾಜಿ ಪುರಸಭೆ, ಪದವಿ ಪೂರ್ವ ಕಾಲೇಜು ಕಲ್ಲುಕಟ್ಟಡ, ಸರ್ಕಾರಿ ಮಹಿಳಾ ಕಾಲೇಜು ಸೇರಿದಂತೆ ವಿವಿಧ ಕಾಲೇಜುಗಳಿಗೆ ಭೇಟಿ ನೀಡಿ ಪ್ರಚಾರ ನೆಡೆಸಿದರು.

ಜಿ.ಪಂ.ಮಾಜಿ ಅಧ್ಯಕ್ಷ ತಗ್ಗಹಳ್ಳಿ ವೆಂಕಟೇಶ್ ಮಾತನಾಡಿ, ಐದನೇ ಬಾರಿಗೆ‌ ದಕ್ಷಿಣ ಪದವೀಧರ ಕ್ಷೇತ್ರದಿಂದ ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸಿರುವ ಮರಿತಿಬ್ಬೇಗೌಡರನ್ನು ಶಿಕ್ಷಕರು ಮೊದಲನೇ ಪ್ರಾಶಸ್ತ್ಯ ಮತಗಳಿಂದ ಗೆಲ್ಲಿಸುವಂತೆ ಮನವಿ ಮಾಡಿದರು, ನಾಲ್ಕು ಬಾರಿ ದಕ್ಷಿಣ ಶಿಕ್ಷಕರ ಕ್ಷೇತ್ರವನ್ನು ಪ್ರತಿನಿಧಿಸಿ ಶಿಕ್ಷಕರ ಸಮಸ್ಯೆಗಳನ್ನು ಪರಿಹರಿಸಲು ಹೋರಾಟದ ಮೂಲಕ ದನಿಯಾಗಿ ರುವ ಮರಿತಿಬ್ಬೇಗೌಡ ಅವರನ್ನು ಐದನೇ ಅವಧಿಗೆ ಆಯ್ಕೆ ಮಾಡುವುದರ ಮೂಲಕ ತಮ್ಮಗಳ ಸೇವೆ ಮಾಡಲು ಅವಕಾಶ ಮಾಡಿಕೊಡುವಂತೆ ಶಿಕ್ಷಕರಲ್ಲಿ ಮನವಿ ಮಾಡಿದರು.

ಶಿಕ್ಷಕರ ಕ್ಷೇತ್ರಕ್ಕೆ ‌ಸಂಬಂಧ ಇಲ್ಲದ ವ್ಯಕ್ತಿಯನ್ನು ಜೆಡಿಎಸ್ ಬಿಜೆಪಿ ಯಿಂದ ಘೋಷಣೆ ಮಾಡಿದ್ದಾರೆ.
ಅವರು ಪದವಿಯನ್ನು ಓದಿಲ್ಲ ಅಥವಾ ಶಿಕ್ಷಕರೂ ಅಲ್ಲ,ಅವರಿಗೆ ಶಿಕ್ಷಕರ ಸಮಸ್ಯೆಗಳ ಬಗ್ಗೆ ಮಾಹಿತಿ ಇಲ್ಲ.ಆದ್ದರಿಂದ ‌ಮರಿತಿಬ್ಬೇಗೌಡ ಅವರು ನಾಲ್ಕು ಬಾರಿ ಶಿಕ್ಷಕರ ಪ್ರತಿನಿಧಿಯಾಗಿ ಕೆಲಸ ಮಾಡಿ ಐದನೇ ಬಾರಿಗೆ ಸ್ಪರ್ಧಿಸಿರುವ ಅವರನ್ನು ಮತ್ತೊಂದು ಅವಧಿಗೆ ಗೆಲ್ಲಿಸುವಂತೆ ಮನವಿ ಮಾಡಿದರು.

ಈ ಸಂದರ್ಭದಲ್ಲಿ ನಗರಸಭೆ ಮಾಜಿ ಸ್ಥಾಯಿ ಸಮಿತಿ ಅಧ್ಯಕ್ಷ ಎಸ್.ಪಿ.ಗೌರೀಶ್, ನಾಗರತ್ನ, ಶಿವರಾಮ್, ಕಾಳೇಗೌಡ,ಭೈರವ ಸೇರಿದಂತೆ ಇತರರು ಹಾಜರಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!