Friday, September 20, 2024

ಪ್ರಾಯೋಗಿಕ ಆವೃತ್ತಿ

ಮಾ.6-7 : ಮಂಡ್ಯ ಜಿಲ್ಲಾ 19ನೆಯ ಕನ್ನಡ ಸಾಹಿತ್ಯ ಸಮ್ಮೇಳನ

ಐತಿಹಾಸಿ ಪ್ರವಾಸಿ ತಾಣವಾದ ಶ್ರೀರಂಗಪಟ್ಟಣದಲ್ಲಿ ಮಾ.6 ಮತ್ತು 7ರಂದು ಮಂಡ್ಯ ಜಿಲ್ಲಾ 19ನೆಯ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯಲಿದೆ ಎಂದು ಜಿಲ್ಲಾ ಕಸಾಪ ಅಧ್ಯಕ್ಷ ರವಿಕುಮಾರ್ ಚಾಮಲಾಪುರ ತಿಳಿಸಿದರು.

ಮಂಡ್ಯದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಸಮ್ಮೇಳಾನಾಧ್ಯಕ್ಷರನ್ನಾಗಿ ಕಬ್ಬು ತಳಿ ವಿಜ್ಞಾನಿ ಡಾ.ಎಸ್.ಎನ್.ಸ್ವಾಮಿಗೌಡ ಅವರನ್ನು ಆಯ್ಕೆ ಮಾಡಲಾಗಿದೆ. ಇವರು ಮೂಲತಃ ಕೆ.ಆರ್.ಪೇಟೆ ತಾಲ್ಲೂಕಿನ ಸೊಳ್ಳೇಪುರ ಗ್ರಾಮದವರಾಗಿದ್ದು, ಹಲವು ಕಬ್ಬು ತಳಿಗಳನ್ನು ಸಂಶೋಧಿಸಿ ನಾಡಿಗೆ ಕೊಡುಗೆಯಾಗಿ ನೀಡಿದ್ದಾರೆ. ಎಂದರು.

ಮಾ.6ರಂದು ಬೆಳಿಗ್ಗೆ 9.30ಕ್ಕೆ ಶ್ರೀರಂಗಪಟ್ಟಣದ ಶ್ರೀರಂಗನಾಥಸ್ವಾಮಿ ದೇವಸ್ಥಾನದ ಆವರಣದಿಂದ ಸಮ್ಮೇಳನ ನಡೆಯುವ ಖಾಸಗಿ ಬಸ್ ನಿಲ್ದಾಣದವರೆಗೆ ಸಮ್ಮೇಳನಾಧ್ಯಕ್ಷರ ಮೆರವಣಿಗೆ ನಡೆಯಲಿದೆ. ಬೆಳಿಗ್ಗೆ 11.30ಕ್ಕೆ  ಕೇಂದ್ರ ಕಸಾಪ ಅಧ್ಯಕ್ಷ ಡಾ.ಮಹೇಶ್ ಜೋಷಿ ಸಮಾರಂಭ ಉದ್ಘಾಟಿಸುವರು. ಶಾಸಕ ರವೀಂದ್ರ ಶ್ರೀಕಂಠಯ್ಯ ಅಧ್ಯಕ್ಷತೆ ವಹಿಸುವರು. ಸಚಿವ ಕೆ.ಸಿ.ನಾರಾಯಣಗೌಡ ಆಶಯ ನುಡಿ ನುಡಿಯುವರು. ಮುಖ್ಯ ಅತಿಥಿಗಳಾಗಿ ಜಿಲ್ಲೆಯ ಎಲ್ಲಾ ಶಾಸಕರು ಭಾಗವಹಿಸುವರು. ಸಮ್ಮೇಳಾಧ್ಯಕ್ಷ ಡಾ.ಎಸ್,ಎನ್.ಸ್ವಾಮಿಗೌಡ ಸಮ್ಮೇಳನಾಧ್ಯಕ್ಷರ ನುಡಿ ನುಡಿಯುವರು ಎಂದರು.

ಗೋಷ್ಠಿಯಲ್ಲಿ ಶ್ರೀರಂಗಪಟ್ಟಣ ತಾಲ್ಲೂಕು ಕಸಾಪ ಅಧ್ಯಕ್ಷ ಬಿ.ಮಂಜುನಾಥ್, ಜಿಲ್ಲಾ ಕಸಾಪ ಕೋಶಾಧ್ಯಕ್ಷ ಅಪ್ಪಾಜಪ್ಪ, ರಮೇಶ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!