ಮಾದಿಗ ಮೀಸಲಾತಿ ಹೋರಾಟ ಸಮಿತಿ ವತಿಯಿಂದ ಮಂಡ್ಯನಗರದ ಹರ್ಡಿಕರ್ ಭವನದಲ್ಲಿ ಡಿ.23ರಂದು ಮಧ್ಯಾಹ್ನ 1 ಗಂಟೆಗೆ ಮಾದಿಗರ ಮುನ್ನಡೆಯೆಂಬ ಹೆಸರಿನ ಒಳಮೀಸಲಾತಿ ಬಗ್ಗೆ ಚರ್ಚಿಸಲು ಮಂಡ್ಯ ಜಿಲ್ಲಾ ಮಟ್ಟದ ಸಮಾವೇಶವನ್ನು ಏರ್ಪಡಿಸಲಾಗಿದೆ ಎಂದು ಸಮಿತಿಯ ಜಿಲ್ಲಾ ಕಾರ್ಯದರ್ಶಿ ಬಿ.ಕೃಷ್ಣ ತಿಳಿಸಿದರು.
ಮಂಡ್ಯದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಸಮಾವೇಶದಲ್ಲಿ ಕೇಂದ್ರ ಸಚಿವ ಎ.ನಾರಾಯಣಸ್ವಾಮಿ, ಮಾಜಿ ಉಪಮುಖ್ಯಮಂತ್ರಿ ಗೋವಿಂದಕಾರಜೋಳ, ಮಾಜಿ ಸಚಿವರಾದ ಕೋಟೆ ಎಂ.ಶಿವಣ್ಣ, ವಿಧಾನ ಪರಿಷತ್ ಸದಸ್ಯರಾದ ಸಿ.ರಮೇಶ್ ಮತ್ತು ನಿವೃತ್ತ ಐಎಎಸ್ ಅಧಿಕಾರಿಗಳಾದ ಬಿ.ಹೆಚ್.ಅನಿಲ್ಕುಮಾರ್, ಲಕ್ಷ್ಮೀನಾರಾಯಣ್ ನೇತೃತ್ವದ ತಂಡವು ಆಗಮಿಸಲಿದೆ ಎಂದರು.
ಈ ಸಭೆಗೆ ಜಿಲ್ಲೆಯ ಎಲ್ಲಾ ತಾಲ್ಲೂಕುಗಳ ಹಳ್ಳಿ, ಹಳ್ಳಿಗಳಿಂದಲೂ ಮತ್ತು ನಗರ ಪ್ರದೇಶ ವ್ಯಾಪ್ತಿಯಿಂದ ಸಮಾಜದ ಮುಖಂಡರು, ಮಹಿಳೆಯರು, ಸಂಘ ಸಂಸ್ಥೆಗಳ ಮುಖಂಡರು ಹಾಗೂ ಗ್ರಾಮಸ್ಥರು ಆಗಮಿಸಬೇಕೆಂದು ಮನವಿ ಮಾಡಿದರು.
ಗೋಷ್ಠಿಯಲ್ಲಿ ಮುಖಂಡರಾದ ಪುಟ್ಟರಾಜು ಕಡಬ, ಹಾಗೂ ಡಿ.ರಾಜು ಉಪಸ್ಥಿತರಿದ್ದರು.