Monday, May 6, 2024

ಪ್ರಾಯೋಗಿಕ ಆವೃತ್ತಿ

ಮಂಡ್ಯ| ನಾಳೆ ಒಳಮೀಸಲಾತಿಗಾಗಿ ಮಾದಿಗರ ಸಮಾವೇಶ

ಮಾದಿಗ ಮೀಸಲಾತಿ ಹೋರಾಟ ಸಮಿತಿ ವತಿಯಿಂದ ಮಂಡ್ಯನಗರದ ಹರ್ಡಿಕರ್ ಭವನದಲ್ಲಿ ಡಿ.23ರಂದು ಮಧ್ಯಾಹ್ನ 1 ಗಂಟೆಗೆ ಮಾದಿಗರ ಮುನ್ನಡೆಯೆಂಬ ಹೆಸರಿನ ಒಳಮೀಸಲಾತಿ ಬಗ್ಗೆ ಚರ್ಚಿಸಲು ಮಂಡ್ಯ ಜಿಲ್ಲಾ ಮಟ್ಟದ ಸಮಾವೇಶವನ್ನು ಏರ್ಪಡಿಸಲಾಗಿದೆ ಎಂದು ಸಮಿತಿಯ ಜಿಲ್ಲಾ ಕಾರ್ಯದರ್ಶಿ ಬಿ.ಕೃಷ್ಣ ತಿಳಿಸಿದರು.

ಮಂಡ್ಯದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಸಮಾವೇಶದಲ್ಲಿ ಕೇಂದ್ರ ಸಚಿವ ಎ.ನಾರಾಯಣಸ್ವಾಮಿ, ಮಾಜಿ ಉಪಮುಖ್ಯಮಂತ್ರಿ ಗೋವಿಂದಕಾರಜೋಳ, ಮಾಜಿ ಸಚಿವರಾದ ಕೋಟೆ ಎಂ.ಶಿವಣ್ಣ, ವಿಧಾನ ಪರಿಷತ್ ಸದಸ್ಯರಾದ ಸಿ.ರಮೇಶ್ ಮತ್ತು ನಿವೃತ್ತ ಐಎಎಸ್ ಅಧಿಕಾರಿಗಳಾದ ಬಿ.ಹೆಚ್.ಅನಿಲ್‌ಕುಮಾರ್, ಲಕ್ಷ್ಮೀನಾರಾಯಣ್ ನೇತೃತ್ವದ ತಂಡವು ಆಗಮಿಸಲಿದೆ ಎಂದರು.

ಈ ಸಭೆಗೆ ಜಿಲ್ಲೆಯ ಎಲ್ಲಾ ತಾಲ್ಲೂಕುಗಳ ಹಳ್ಳಿ, ಹಳ್ಳಿಗಳಿಂದಲೂ ಮತ್ತು ನಗರ ಪ್ರದೇಶ ವ್ಯಾಪ್ತಿಯಿಂದ ಸಮಾಜದ ಮುಖಂಡರು, ಮಹಿಳೆಯರು, ಸಂಘ ಸಂಸ್ಥೆಗಳ ಮುಖಂಡರು ಹಾಗೂ ಗ್ರಾಮಸ್ಥರು ಆಗಮಿಸಬೇಕೆಂದು ಮನವಿ ಮಾಡಿದರು.

ಗೋಷ್ಠಿಯಲ್ಲಿ ಮುಖಂಡರಾದ ಪುಟ್ಟರಾಜು ಕಡಬ, ಹಾಗೂ ಡಿ.ರಾಜು ಉಪಸ್ಥಿತರಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!