Thursday, September 19, 2024

ಪ್ರಾಯೋಗಿಕ ಆವೃತ್ತಿ

ವಿದ್ಯುತ್ ತಗುಲಿ ಕಬ್ಬು ಬೆಳೆ ಭಸ್ಮ : ಪರಿಹಾರ ನೀಡಲು ಮಧುಚಂದನ್ ಆಗ್ರಹ

ಮಂಡ್ಯ ತಾಲ್ಲೂಕಿನ ಬಿ ಹೊಸೂರು ಗ್ರಾಮದ ಮಾಧವ ಕುಮಾರ್ ಎಂಬುವವರು ಬೆಳೆದಿದ್ದ 2 ಎಕರೆ  ಕಬ್ಬು ಬೆಳೆಗೆ ಆಕಸ್ಮಿಕ ವಿದ್ಯುತ್ ತಗುಲಿ ಭಸ್ಮಗೊಂಡಿದೆ. ಇದರ ಮಾಹಿತಿ ತಿಳಿದು ಕರ್ನಾಟಕ ರಾಜ್ಯ ರೈತಸಂಘದ ಪ್ರಧಾನ ಕಾರ್ಯದರ್ಶಿ ಎಸ್.ಸಿ.ಮಧುಚಂದನ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ನಂತರ ಮಾತನಾಡಿದ ಅವರು, ಎರಡು ಎಕರೆ ಜಮೀನಿನಲ್ಲಿ ವರ್ಷವಿಡೀ ರೈತ ಬೆಳೆದಿದ್ದ ಕಬ್ಬು ವಿದ್ಯುತ್ ತಂತಿ ತಗುಲಿ ಬೆಂಕಿಗಾಹುತಿಯಾಗಿ ಸಂಕಷ್ಟಕ್ಕೆ ಸಿಲುಕಿದ್ದಾರೆ, ಕೂಡಲೇ ಸಂಬಂಧಿಸಿದ ಇಲಾಖೆಯ ಅಧಿಕಾರಿಗಳು ನಷ್ಟಕ್ಕೊಳಗಾದ ರೈತನಿಗೆ ಪರಿಹಾರ ನೀಡಬೇಕೆಂದು ಆಗ್ರಹಿಸಿದರು.

nudikarnataka.com

ನಂತರ ಸೆಸ್ಕ್‌ ಮತ್ತು ಶುಗರ್ ಫ್ಯಾಕ್ಟರಿಯ ಅಧಿಕಾರಿಗಳೊಂದಿಗೆ ಮಾತನಾಡಿ ಸೂಕ್ತ ಪರಿಹಾರ ಕೊಡಿಸುವ ಭರವಸೆ ನೀಡಿದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!