Saturday, May 18, 2024

ಪ್ರಾಯೋಗಿಕ ಆವೃತ್ತಿ

ಮಹಾ ಶಿವರಾತ್ರಿ : ಕಾಶಿ ವಿಶ್ವನಾಥನಿಗೆ ವಿಶೇಷ ಪೂಜೆ

ಮಂಡ್ಯ ತಾಲ್ಲೂಕಿನ ಹೊಸಬೂದನೂರು ಗ್ರಾಮದಲ್ಲಿರುವ ಪ್ರಸಿದ್ಧ ಪ್ರವಾಸಿ ತಾಣ ಶ್ರೀಕಾಶಿ ವಿಶ್ವನಾಥ ದೇವಾಲಯದಲ್ಲಿ ಮಹಾಶಿವರಾತ್ರಿ ಅಂಗವಾಗಿ ಶನಿವಾರದಿಂದ ಭಾನುವಾರದವರೆಗೂ ವಿಶೇಷ ಪೂಜಾ ಕಾರ್ಯಕ್ರಮ ಹಾಗೂ ದೀಪೋತ್ಸವವನ್ನು ಹಮ್ಮಿಕೊಳ್ಳಲಾಗಿತ್ತು.

ಶನಿವಾರ ಮುಂಜಾನೆಯಿಂದ ಕಾಸಿ ವಿಶ್ವನಾಥನಿಗೆ ವಿಶೇಷ ಪೂಜಾ, ಅಲಂಕಾರ ಮಾಡಲಾಗಿತ್ತು. ಸಂಜೆಯ ವೇಳೆಗೆ ವಿವಿಧ ಗ್ರಾಮಗಳಿಂದ ಭಕ್ತರು ನೂರಾರು ದೀಪಗಳಿಗೆ ಎಣ್ಣೆ ಹಾಗೂ ಬತ್ತಿಯನ್ನು ಹಾಕಿ ದೀಪ ಬೆಳಗಿದರು. ಭಾನುವಾರ ಮಧ್ಯಾಹ್ನ ಸಹಸ್ರಾರು ಜನರಿಗೆ ಅನ್ನಸಂತರ್ಪಣೆ ಏರ್ಪಡಿಸಲಾಗಿತ್ತು. ಆಧ್ಯಕ್ಷ ಶಿವಲಿಂಗ, ಉಪಾಧ್ಯಕ್ಷ ಚಂದ್ರ ಹಾಗೂ ಗ್ರಾಮಸ್ಥರು ಕಾರ್ಯಕ್ರಮದ ಉಸ್ತುವಾರಿ ವಹಿಸಿದ್ದರು.

ಬೀರೇಶ್ವರ ದೇವಾಲಯದಲ್ಲಿ ವಿಶೇಷ ಪೂಜೆ

ಹೊಸಬದನೂರು ಹಾಗೂ ಉಮ್ಮಡಹಳ್ಳಿ ಗ್ರಾಮದ ಮಧ್ಯಭಾಗದಲ್ಲಿ ನೆಲೆಸಿರುವ ಶ್ರೀಬೇರೆಶ್ವರ ದೇವಾಲಯದಲ್ಲೂ ಸಹ ಮಹಾಶಿವರಾತ್ರಿಯ ಅಂಗವಾಗಿ ವಿಶೇಷ ಪೂಜಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು. ಭಾನುವಾರ ಮುಂಜಾನೆಯಿಂದ ಮಧ್ಯಾಹ್ನದವರೆಗೂ ಭಕ್ತರಿಗೆ ಅನ್ನಸಂತರ್ಪಣೆ ಏರ್ಪಡಿಸಲಾಗಿತ್ತು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!