Thursday, September 19, 2024

ಪ್ರಾಯೋಗಿಕ ಆವೃತ್ತಿ

ಮಹಾಕುಂಭಮೇಳದ ಬೋಟಿಂಗ್ ವಿಸ್ತರಣೆ

ಕೆ.ಆರ್.ಪೇಟೆಯ ತ್ರಿವೇಣಿ ಸಂಗಮದಲ್ಲಿ ಮಹಾಕುಂಭಮೇಳದ ಪ್ರಯುಕ್ತ ಆಯೋಜಿಸಿದ್ದ ಬೋಟಿಂಗ್ ವ್ಯವಸ್ಥೆಯನ್ನು ಇನ್ನೂ 10 ದಿನಗಳ ವಿಸ್ತರಿಸಲಾಗಿದೆ.

ಅಂಬಿಗರಹಳ್ಳಿ, ಪುರ, ಸಂಗಾಪುರದ ಕಾವೇರಿ, ಲಕ್ಷ್ಮಣತೀರ್ಥ-ಹೇಮಾವತಿ ನದಿಗಳ ಸಂಗಮ ಸ್ಥಳದಲ್ಲಿ ಮಹಾಕುಂಭಮೇಳದ ಪ್ರಯುಕ್ತ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಜನರಲ್ ಕಾರ್ಯಪ್ಪ ಜಲ ಸಾಹಸ ಅಕಾಡೆಮಿ ಪ್ರಯುಕ್ತ ಜಲಸಾಹಸ ಕ್ರೀಡೆಯನ್ನು ಆಯೋಜಿಸಲಾಗಿತ್ತು.

ಕುಂಭಮೇಳಕ್ಕೆ ಹರಿದು ಜನಸಾಗರವೂ ಬೋಟಿಂಗ್ ವ್ಯವಸ್ಥೆ ಕಂಡು ಸಂತಸ ವ್ಯಕ್ತಪಡಿಸಿದರು. ಸಾವಿರಾರು ಜನರು ಬೋಟ್‌ಗಳಲ್ಲಿ ಸಂಚರಿಸಿ ಯೋಜನೆಯ ಸದುಪಯೋಗಪಡಿಸಿಕೊಂಡರು. ಅಲ್ಲದೇ ಇನ್ನಷ್ಟು ದಿನಗಳ ಕಾಲ ವಿಸ್ತರಿಸಬೇಕು ಎಂಬ ಒತ್ತಾಯ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಜಲ ಸಾಹಸ ಕ್ರೀಡೆಯ ಪ್ರಯುಕ್ತ ಆಯೋಜಿಸಿದ್ದ ಬೋಟಿಂಗ್ ಸೌಲಭ್ಯವನ್ನು 10 ದಿನಗಳ ಕಾಲ ವಿಸ್ತರಿಸಲಾಗಿದೆ.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!