ಕಾವೇರಿ ನೀರನ್ನು ತಮಿಳುನಾಡಿಗೆ ಹರಿಸುತ್ತಿರುವುದನ್ನು ಖಂಡಿಸಿ ಜೆಡಿಎಸ್ ಸೇರಿದಂತೆ ವಿವಿಧ ಜನಪರ ಸಂಘಟನೆಗಳು ಮಳವಳ್ಳಿ ಪಟ್ಟಣದಲ್ಲಿ ಬಂದ್ ನಡೆಸಿದರು.
ಮಾಜಿ ಶಾಸಕ ಡಾ. ಕೆ. ಅನ್ನದಾನಿ ಮಾತನಾಡಿ, ಕುಡಿಯುವ ನೀರಿಗೂ ತೊಂದರೆ ಅನುಭವಿಸುತ್ತಿರುವ ಪ್ರಸ್ತುತ ಸಂದರ್ಭದಲ್ಲಿ ತಮಿಳುನಾಡಿಗೆ ನೀರು ಬಿಡುತ್ತಿರುವುದು ಖಂಡನೀಯ. ಸವ೯ಪಕ್ಷದ ಸಭೆಯಲ್ಲಿ ನೀರು ಬಿಡಲ್ಲ ಎಂದು ಹೇಳಿದ್ದರೂ ನೀರು ಬಿಡಲಾಗುತ್ತಿದೆ. ರೈತರ ಆಕ್ರೋಶಕ್ಕೆ ಬೆಲೆ ತರಬೇಕಾಗುತ್ತದೆ. ಕಾಂಗ್ರೆಸ್ ಸಕಾ೯ರ ಘೋರ ಅನ್ಯಾಯ ಮಾಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿದರು.
ಕೂಡಲೇ ತಮಿಳುನಾಡಿಗೆ ಹರಿಸುತ್ತಿರುವ ಕಾವೇರಿ ನೀರನ್ನು ನಿಲ್ಲಿಸಬೇಕು. ಬೈಕ್ ಜಾಥದ ಮೂಲಕ ಪ್ರತಿಭಟನೆ ಮೆರವಣಿಗೆ ನಡೆಸಿದರು. ಬಂದ್ ಸಕಾರಾತ್ಮಕ ಪ್ರತಿಕ್ರಿಯೆ ವ್ಯಕ್ತವಾಯಿತು.
ಪ್ರತಿಭಟನೆಯಲ್ಲಿ ಪುರಸಭೆ ಸದಸ್ಯರಾದ ನೂರುಲ್ಲಾ ನಾಗೇಶ್. ನಂದಕುಮಾರ್, ಸಿದ್ದರಾಜು, ಬಸವರಾಜು, ಮುಖಂಡರಾದ ದೊಡ್ಡಯ್ಯ, ದೊಡ್ಡಣ್ಣ, ಚಿಕ್ಕರಾಜು, ಮೆಹಬೂಬ್ ಪಾಷ, ಅನಂತು ಸೇರಿದಂತೆ ಇತರರು ಇದ್ದರು.