Saturday, May 18, 2024

ಪ್ರಾಯೋಗಿಕ ಆವೃತ್ತಿ

ಮಳವಳ್ಳಿ: ಅತ್ಯಾಚಾರಕ್ಕೆ ಬಲಿಯಾದ ಬಾಲಕಿಯ ಮನೆಗೆ ಸಚಿವರ ಭೇಟಿ

ನಾಲ್ಕು ದಿನಗಳ ಹಿಂದೆ ಇಲ್ಲಿನ ಟ್ಯೂಷನ್ ಕೇಂದ್ರ ವೊಂದರಲ್ಲಿ ನಡೆದ ಅತ್ಯಾಚಾರಕ್ಕೆ ಒಳಗಾಗಿ ಬಲಿಯಾದ ಬಾಲಕಿಯ ಮನೆಗೆ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವಥ್ ನಾರಾಯಣ್ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ.ಗೋಪಾಲಯ್ಯ ಭೇಟಿ ನೀಡಿ‌ದರು.

ಮಳವಳ್ಳಿ ಪಟ್ಟಣದಲ್ಲಿರುವ ಬಾಲಕಿಯ ಮನೆಗೆ ತೆರಳಿದ ಸಚಿವರಿಬ್ಬರೂ ಮೃತ ಬಾಲಕಿಯ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ, ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳಿದರು.

ಬಳಿಕ ಮಾತನಾಡಿದ ಅಶ್ವತ್ಥ ನಾರಾಯಣ್, ಮಳವಳ್ಳಿಯಲ್ಲಿ ನಡೆದಿರುವ ಘಟನೆ ಖಂಡನೀಯ. ಈಗಾಗಲೇ ಆರೋಪಿಯ ತ್ವರಿತ ವಿಚಾರಣೆ ನಡೆಸಿ, ತಕ್ಕ ಶಿಕ್ಷೆ ನೀಡಲು ಸೂಕ್ತ ಸಾಕ್ಷ್ಯಾಧಾರ ಸಂಗ್ರಹಿಸುವಂತೆ ಪೋಲಿಸರಿಗೆ,ಜಿಲ್ಲಾಡಳಿತದ ಅಧಿಕಾರಿಗಳ ಜೊತೆ ಜಿಲ್ಲಾ ಉಸ್ತುವಾರಿ ಸಚಿವರು ಮಾತನಾಡಿದ್ದಾರೆ ಎಂದು ತಿಳಿಸಿದರು.

ಸಮಾಜ ಬಹುಮಟ್ಟಿಗೆ ಆರೋಗ್ಯಕರವಾಗಿದೆ. ಆದರೂ ಒಮ್ಮೊಮ್ಮೆ ಇಂತಹ ಘಟನೆಗಳು ನಡೆದು ಬಿಡುತ್ತವೆ. ಇದು ವಿಷಾದಕರ ಸಂಗತಿಯಾಗಿದೆ ಎಂದು ಅವರು ಅಭಿಪ್ರಾಯ ಪಟ್ಟರು.

ಆರೋಪಿಯ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು.‌ ಈಗಾಗಲೇ ಪೋಕ್ಸೊ ಕಾಯ್ದೆಯಡಿ ಎಫ್ಐಆರ್ ಪ್ರಕರಣ ದಾಖಲಿಸಲಾಗಿದೆ ಎಂದು ಅವರು ವಿವರಿಸಿದರು.

ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸದಸ್ಯ ಸಿದ್ದರಾಮಯ್ಯ,  ಬಿಜೆಪಿ ಮುಖಂಡ ಯಮದೂರು ಸಿದ್ದರಾಜು ಈ ಸಂಧರ್ಭದಲ್ಲಿ ಉಪಸ್ಥಿತರಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!