Saturday, May 18, 2024

ಪ್ರಾಯೋಗಿಕ ಆವೃತ್ತಿ

ಮಳವಳ್ಳಿ | ಜೆಡಿಎಸ್ ಪಕ್ಷದಲ್ಲಿ ಗೌರವ ಸಿಗದ ಕಾರಣ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ : ಟಿ.ಎಲ್. ಪ್ರಕಾಶ್

ಜೆಡಿಎಸ್ ಪಕ್ಷದಲ್ಲಿ ಗೌರವ ಸಿಗದ ಕಾರಣ ಜೆಡಿಎಸ್ ಪಕ್ಷ ತೊರೆದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡಿದ್ದು ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಪಿ.ಎಂ ನರೇಂದ್ರಸ್ವಾಮಿ ಅವರ ಗೆಲುವಿಗೆ ಶ್ರಮಿಸುವುದಾಗಿ ಸಮಾಜ ಸೇವಕ ಟಿ.ಎಲ್. ಪ್ರಕಾಶ್ ತಿಳಿಸಿದರು.

ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು ಜೆಡಿಎಸ್ ಪಕ್ಷಕ್ಕಾಗಿ ದುಡಿದ ಮುಖಂಡರನ್ನು ಕಡೆಗಣಿಸುತ್ತಿರುವುದರಿಂದ ಹಲವು ಮುಖಂಡರು ಈಗಗಲೇ ಪಕ್ಷ ಬಿಟ್ಟಿದ್ದಾರೆ. ಜೆಡಿಎಸ್ ಪಕ್ಷ ಸಂಘಟನೆಗೆ ಹಲವಾರು ವರ್ಷಗಳಿಂದ ದುಡಿದ ನನಗೆ ಪಕ್ಷದಲ್ಲಿ ಸರಿಯಾಗಿ ನಡೆಸಿಕೊಳ್ಳದ ಹಿನ್ನೆಲೆಯಲ್ಲಿ ಜೆಡಿಎಸ್ ಪಕ್ಷವನ್ನು ಬಿಟ್ಟಿದ್ದೇನೆಂದು ಹೇಳಿದರು.

ಡಿ. ಕೆ. ಶಿವಕುಮಾರ್, ಸಿದ್ದರಾಮಯ್ಯ ಪಿ.ಎಂ. ನರೇಂದ್ರಸ್ವಾಮಿ ಹಾಗೂ ದಡದಪುರ ಶಿವಣ್ಣ ನವರ ನಾಯಕತ್ವವನ್ನು ಮೆಚ್ಚಿ ಕಾಂಗ್ರೆಸ್‌ ಪಕ್ಷಕ್ಕೆ ಸೇಪ೯ಡೆಗೊಂಡಿದ್ದು ದಕ್ಷ ಆಡಳಿತಗಾರರು ಹಾಗೂ ಅಭಿವೃದ್ದಿಯ ಚಿಂತಕರು ಆಗಿರುವ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಪಿ.ಎಂ. ನರೇಂದ್ರಸ್ವಾಮಿ ಅವರನ್ನು ಗೆಲ್ಲಿಸುವುದು ನಮ್ಮ ಗುರಿಯಾಗಿದೆ ಎಂದರು.

ಗೋಷ್ಠಿಯಲ್ಲಿ ರವಿಚಂದ್ರ, ಮುರುಗೇಶ್ ರಮೇಶ್, ಶಿವರಾಜ್, ಹಾಜರಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!