ಮಂಡ್ಯ ತಾಲ್ಲೂಕಿನ ತೂಬಿನಕೆರೆ ಬಳಿ ಬೆಂಗಳೂರು-ಮೈಸೂರು ಹೆದ್ದಾರಿಯ ಸರ್ವಿಸ್ ರಸ್ತೆಯಲ್ಲಿ ಇಂದು ಸಂಭವಿಸಿದ ಅಪಘಾತದಲ್ಲಿ ಬೈಕ್ ಸವಾರ ಮೃತಪಟ್ಟಿದ್ದಾರೆ.
ನಂಜನಗೂಡು ಪಟ್ಟಣದ ನಿವಾಸಿ ಕಾಶಿ ವಿಶ್ವನಾಥ(59) ಮೃತಪಟ್ಟ ದುರ್ದೈವಿ.
ಕಾಶಿ ವಿಶ್ವನಾಥ ಅವರು ಇಂದು ನಂಜನಗೂಡಿನಿಂದ ಬೆಂಗಳೂರಿಗೆ ತಮ್ಮ ರಾಯಲ್ ಎನ್ ಫೀಲ್ಡ್ ಬೈಕ್ ನಲ್ಲಿ ಹೋಗುತ್ತಿದ್ದಾಗ ಸರ್ವಿಸ್ ರಸ್ತೆ ಬದಿಯಲ್ಲಿ ಪಂಚರ್ ಆಗಿ ನಿಂತಿದ್ದ ಗೂಡ್ಸ್ ವಾಹನವನ್ನು ಕಂಡು ಗಾಬರಿಗೊಂಡು ತಕ್ಷಣ ಬ್ರೇಕ್ ಹಾಕಿದ್ದಾರೆ.
ಬ್ರೇಕ್ ಹಾಕಿದ ತಕ್ಷಣ ಬೈಕ್ ಆಯತಪ್ಪಿ ರಸ್ತೆಗೆ ಬಿದ್ದ ಕಾಶಿ ವಿಶ್ವನಾಥ ಅವರು ತೀವ್ರವಾಗಿ ಗಾಯಗೊಂಡು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.
ಸ್ಥಳಕ್ಕೆ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮೃತ ಕಾಶಿ ವಿಶ್ವನಾಥ್ವ ಅವರ ಪುತ್ರ ರಕ್ಷಿತ್ ಪಟೇಲ್ ನೀಡಿದ ದೂರಿನ ಮೇರೆಗೆ ಮಂಡ್ಯ ಗ್ರಾಮಾಂತರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.