ಮಂಡ್ಯ ಜಿಲ್ಲೆಯ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿರುವ ಕಾಂಗ್ರೆಸ್ ಅಭ್ಯರ್ಥಿಗಳಿಗೆ ವಿಧಾನ ಪರಿಷತ್ ಸದಸ್ಯ ದಿನೇಶ್ ಗೂಳಿಗೌಡ ಇಂದು ಬಿ.ಫಾರಂ ವಿತರಣೆ ಮಾಡಲಿದ್ದಾರೆ.
ವಿಧಾನ ಪರಿಷತ್ ಸದಸ್ಯ ದಿನೇಶ್ ಗೂಳಿಗೌಡ ಅವರು ನಿನ್ನೆ ಕೆಪಿಸಿಸಿ ಕಚೇರಿಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರಿಂದ ಬಿ.ಫಾರಂ ಪಡೆದು ಕಾಂಗ್ರೆಸ್ ಅಭ್ಯರ್ಥಿಗಳಾದ ಮಂಡ್ಯ ಜಿಲ್ಲೆಯ ನಾಗಮಂಗಲ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾದ ಎನ್. ಚಲುವರಾಯಸ್ವಾಮಿ, ಮಳವಳ್ಳಿ ಮೀಸಲು ಕ್ಷೇತ್ರದ ಅಭ್ಯರ್ಥಿ ಪಿ.ಎಂ. ನರೇಂದ್ರಸ್ವಾಮಿ, ಶ್ರೀರಂಗಪಟ್ಟಣ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಎ.ಬಿ. ರಮೇಶ್ ಬಂಡಿ ಸಿದ್ದೇಗೌಡ, ಕೆ.ಆರ್. ಪೇಟೆ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಬಿ.ಎಲ್. ದೇವರಾಜ್ ಅವರಿಗೆ ಬಿ. ಫಾರಂ ವಿತರಣೆ ಮಾಡುವ ಸಂಬಂಧ ಇಂದು ಬೆಳಿಗ್ಗೆ ಮಂಡ್ಯಕ್ಕೆ ಪ್ರಯಾಣ ಬೆಳೆಸಿದರು.