Thursday, September 19, 2024

ಪ್ರಾಯೋಗಿಕ ಆವೃತ್ತಿ

ಮಂಡ್ಯ ಜಿಲ್ಲೆಯ ಎಲ್ಲಾ ಕ್ಷೇತ್ರಗಳಿಂದ ಜನತಾ ಪಾರ್ಟಿ ಸ್ಪರ್ಧೆ : ಮಹದೇವಸ್ವಾಮಿ

ಕರ್ನಾಟಕ ಜನತಾ ಪಾರ್ಟಿಯು ರಾಜ್ಯಾಧ್ಯಕ್ಷರಾದ ಡಾ.ಬಿ.ಟಿ.ಲಲಿತ ನಾಯಕ್ ನೇತೃತ್ವದಲ್ಲಿ ಮಂಡ್ಯ ಜಿಲ್ಲೆಯ ಏಳು ಕ್ಷೇತ್ರಗಳಲ್ಲೂ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸಲಾಗುವುದು ಎಂದು ಪಕ್ಷದ ಮಂಡ್ಯ ಜಿಲ್ಲಾಧ್ಯಕ್ಷ ಮಹದೇವಸ್ವಾಮಿ ತಿಳಿಸಿದರು.

ಮಂಡ್ಯದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಶ್ರೀರಂಗಪಟ್ಟಣ ವಿಧಾನಸಭಾ ಕ್ಷೇತ್ರದಿಂದ ಹರೀಶ್ ಗೌಡ ಕಣಕ್ಕೆ ಇಳಿಯಲಿದ್ದಾರೆ. ಇನ್ನುಳಿದ ಕ್ಷೇತ್ರಗಳಲ್ಲಿ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ ಚಾಲನೆಯಲ್ಲಿದೆ. ಪಕ್ಷದ ಪ್ರಣಾಳಿಕೆಯನ್ನು ಸಿದ್ದಪಡಿಸುವ ಕಾರ್ಯ ನಡೆಯುತ್ತಿದ್ದು, ಶಿಕ್ಷಣ, ಆರೋಗ್ಯ, ಕೃಷಿ, ಪಶು ಸಂಗೋಪನೆ ಸಂಬಂಧಿಸಿದ ವಿಷಯಗಳಿಗೆ ಒತ್ತು ನೀಡಲಾಗುವುದೆಂದು ತಿಳಿಸಿದರು.

ಗೋಷ್ಠಿಯಲ್ಲಿ ರಾಜ್ಯ ಉಪಾಧ್ಯಕ್ಷ ಹರೀಶ್ ಗೌಡ, ಜಿಲ್ಲಾಧ್ಯಕ್ಷ ರವಿಕುಮಾರ್, ಸಂಘಟನಾ ಕಾರ್ಯದರ್ಶಿ ಪ್ರಭು ಉಪಸ್ಥಿತರಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!