“ಮಂಡ್ಯ ಜನರ ಆಶೀರ್ವಾದ ಸಿಗುವವರೆಗೆ ಜಿಲ್ಲೆಯಲ್ಲಿ ಯಾವುದೇ ಕಾಮಗಾರಿಗಳ ಗುದ್ದಲಿ ಪೂಜೆ ನೆರವೇರಿಸುವುದಿಲ್ಲ” ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹೇಳಿದ್ದಾರೆ.
ಮಂಡ್ಯದ ಶ್ರೀರಂಗಪಟ್ಟಣದ ಟಿ.ಎಂ.ಹೊಸೂರಿನಲ್ಲಿ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ಮಂಡ್ಯದ ಜನರಿಗೆ ನನ್ನ ಮೇಲೆ ಪ್ರೀತಿ ಇದೆ, ಮತ್ತೊಂದು ಅವಧಿಗೆ ನನ್ನನ್ನು ಆಶೀರ್ವದಿಸುತ್ತಾರೆಂದು ಭರವಸೆ ನನಗಿದೆ. ಹೀಗಾಗಿ ಜೆಡಿಎಸ್ ಪಕ್ಷವನ್ನು ಗೆಲ್ಲಿಸಿಕೊಡಬೇಕೆಂದು ಭಾವನಾತ್ಮಕ ಹೇಳಿದರು.
ಈ ಮೂಲಕ ತಾವು ಮಂಡ್ಯದಿಂದ ಅದೃಷ್ಟ ಪರೀಕ್ಷೆ ಮಾಡುವ ಸೂಚನೆ ನೀಡಿದ ನಿಖಿಲ್ ಕುಮಾರಸ್ವಾಮಿ, ಮಂಡ್ಯದಿಂದ ಮತ್ತೊಮ್ಮೆ ರಾಜಕೀಯ ಭವಿಷ್ಯ ಅರಸಲು ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ ಎನ್ನುವ ಮಾತೀಗ ರಾಜಕೀಯ ವಲಯದಲ್ಲಿ ಹರಿದಾಡುತ್ತಿದೆ. ಆದರೆ ನಿಖಿಲ್ ಮಾತಿಗೆ ಮಂಡ್ಯ ಜನರು ಹೇಗೆ ಪ್ರತಿಕ್ರಿಯಿಸುತ್ತಾರೆಂದು ಕಾದು ನೋಡಬೇಕಾಗಿದೆ.