Friday, September 20, 2024

ಪ್ರಾಯೋಗಿಕ ಆವೃತ್ತಿ

ಮಂಡ್ಯ ಉಪವಿಭಾಗಾಧಿಕಾರಿಯಾಗಿ ಎಂ.ಶಿವಮೂರ್ತಿ ನೇಮಕ

ಮಂಡ್ಯ ಉಪವಿಭಾಗಾಧಿಕಾರಿಯಾಗಿ ಎಂ.ಶಿವಮೂರ್ತಿ ಅವರನ್ನು ಸರ್ಕಾರ ನೇಮಕ ಮಾಡಿ ಆದೇಶ ಹೊರಡಿಸಿದೆ.

ಮಂಡ್ಯ ಉಪವಿಭಾಗಾಧಿಕಾರಿ (ಪ್ರಭಾರಿ) ಯಾಗಿ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಉಪನಿರ್ದೇಶಕ ಕೃಷ್ಣಕುಮಾರ್ ಕರ್ತವ್ಯ ನಿರ್ವಹಿಸುತ್ತಿದ್ದರು. ಇವರ ಸ್ಥಾನಕ್ಕೆ ಎಂ.ಶಿವಮೂರ್ತಿ ಅವರಿಗೆ ಪದೋನ್ನತಿ ನೀಡಿ ಮಂಡ್ಯ ಉಪವಿಭಾಗಾಧಿಕಾರಿಯಾಗಿ ನಿಯೋಜಿಸಿ ಸರ್ಕಾರ ಆದೇಶ ಹೊರಡಿಸಿದೆ.

ಜಾಹೀರಾತು

ರಾಜೀವ್ ಗಾಂಧಿ ಇನ್ಸ್ಟಿಟ್ಯೂಟ್ ಆಫ್ ಚೆಸ್ಟ್ ಡಿಸೀಸ್ ನಲ್ಲಿ ಆಡಳಿತಾಧಿಕಾರಿಯಾಗಿ ಕೆಲಸ ನಿರ್ವಹಿಸುತ್ತಿದ್ದ ಎಂ.ಶಿವಮೂರ್ತಿ ಅವರಿಗೆ ಪದೋನ್ನತಿ ನೀಡಿ ಸರ್ಕಾರ ಮಂಡ್ಯ ಉಪವಿಭಾಗಾಧಿಕಾರಿಯಾಗಿ‌ ನಿಯೋಜಿಸಿದೆ.
ಎಂ.ಶಿವಮೂರ್ತಿ ಅವರು ಈ ಹಿಂದೆ ಕೆ.ಆರ್.ಪೇಟೆಯಲ್ಲಿ ಮೂರು ವರ್ಷ,ನಂಜನಗೂಡಿನ ತಹಶೀಲ್ದಾರ್ ಆಗಿಯೂ ಕರ್ತವ್ಯ ನಿರ್ವಹಿಸಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!