ಕರ್ನಾಟಕ ಜಾನಪದ ಅಕಾಡೆಮಿ ಸಹ ಸದಸ್ಯರಾಗಿ ಮಂಡ್ಯ ಜಿಲ್ಲೆಯ ಜಿ.ಎನ್.ಮಂಜೇಶ್ ಚನ್ನಾಪುರ ಆಯ್ಕೆಯಾಗಿದ್ದಾರೆ.
ಕನ್ನಡ ನಾಡು ನುಡಿ ಹಾಗೂ ಜಾನಪದ ಕ್ಷೇತ್ರಕ್ಕೆ ಅವರಯ ಸಲ್ಲಿಸಿರುವ ಅನುಪಮ ಸೇವೆಯನ್ನು ಗುರುತಿಸಿ ಕರ್ನಾಟಕ ಜಾನಪದ ಅಕಾಡೆಮಿಯ ಸರ್ವಸದಸ್ಯರ ಸಭೆಯಲ್ಲಿ ಸಹ ಸದಸ್ಯರನ್ನಾಗಿ ಆಯ್ಕೆ ಮಾಡಲಾಗಿದೆ, ತಮ್ಮ ಅವಧಿಯಲ್ಲಿ ಜಾನಪದ ಕ್ಷೇತ್ರದ ಬೆಳವಣಿಗೆ ಮತ್ತು ಸಂವರ್ಧನೆಗೆ ಅನನ್ಯ ಸೇವೆಯನ್ನು ಸಲ್ಲಿಸುವಂತಾಗಲಿ ಎಂದು ಆಶಿಸುತ್ತೇನೆ ಎಂದು ಅಕಾಡೆಮಿ ಅಧ್ಯಕ್ಷ ಗೊಲ್ಲಹಳ್ಳಿ ಶಿವಪ್ರಸಾದ್ ತಿಳಿಸಿದ್ದಾರೆ.