Monday, September 16, 2024

ಪ್ರಾಯೋಗಿಕ ಆವೃತ್ತಿ

‘ಜನತಾ ದರ್ಶನ’ದಲ್ಲಿ ಬಿಜೆಪಿ ಸಂಸದ- ಕಾಂಗ್ರೆಸ್ ಶಾಸಕನ ಪೌರುಷ ಪ್ರದರ್ಶನ: ವೀಡಿಯೋ ವೈರಲ್

ಜನತಾ ದರ್ಶನ ಕಾರ್ಯಕ್ರಮವು ಸಂಸದ-ಶಾಸಕರ ನಡುವೆ ‘ಪೌರುಷ ದರ್ಶನ’ಕ್ಕೆ ಸಾಕ್ಷಿಯಾದ ಘಟನೆ ಕೋಲಾರದಲ್ಲಿ ನಡೆದಿದೆ.

ಇಂದು ರಾಜ್ಯದಲ್ಲಿ ಎಲ್ಲಾ ಜಿಲ್ಲೆಗಳಲ್ಲಿ ಏಕಕಾಲಕ್ಕೆ ಜನತಾ ದರ್ಶನ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ಕೋಲಾರದಲ್ಲೂ ಕೂಡ ಉಸ್ತುವಾರಿ ಸಚಿವ ಭೈರತಿ ಸುರೇಶ್‌ ಅವರ ಅಧ್ಯಕ್ಷತೆಯಲ್ಲಿ ಆಯೋಜಿಸಲಾಗಿತ್ತು.

ಈ ಸಭೆಯಲ್ಲಿ ಬಿಜೆಪಿ ಸಂಸದ ಎಸ್‌ ಮುನಿಸ್ವಾಮಿ ಹಾಗೂ ಕಾಂಗ್ರೆಸ್ ಶಾಸಕ ಎಸ್‌ ಎನ್ ನಾರಾಯಣಸ್ವಾಮಿ ಅವರ ನಡುವೆ ವೇದಿಕೆಯ ಮೇಲೆಯೇ ಮಾತಿನ ಚಕಮಕಿ ನಡೆದಿದ್ದು, ಬಹಿರಂಗವಾಗಿಯೇ ಕೈ – ಕೈ ಮಿಲಾಯಿಸುವ ಹಂತಕ್ಕೆ ಜನಪ್ರತಿನಿಧಿಗಳು ಮುಂದಾಗಿದ್ದರು. ಸಕಾಲಕ್ಕೆ ಪೊಲೀಸರು ಮಧ್ಯ ಪ್ರವೇಶಿಸಿದ್ದರಿಂದ ಜಗಳ ತಪ್ಪಿದೆ.

“>

ಜನತಾ ದರ್ಶನ ಕಾರ್ಯಕ್ರಮದಲ್ಲಿ ಬಿಜೆಪಿ ಸಂಸದ ಎಸ್‌ ಮುನಿಸ್ವಾಮಿ ತಮ್ಮ ಭಾಷಣದ ವೇಳೆ ಅರಣ್ಯ ಜಮೀನು ಒತ್ತುವರಿ ತೆರವು ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡುತ್ತಾ, ಜಿಲ್ಲಾ ಉಸ್ತುವಾರಿ ಸಚಿವ ಭೈರತಿ ಸುರೇಶ್‌ ಅವರಿಗೆ ಭೂಗಳ್ಳರನ್ನು ಪಕ್ಕದಲ್ಲಿಯೇ ಕೂರಿಸಿಕೊಂಡಿದ್ದೀರಾ ಎಂದು ಕುಟುಕಿದರು. ಇದರಿಂದ ಭೈರತಿ ಸುರೇಶ್‌ ಅವರ ಪಕ್ಕದಲ್ಲಿ ಕುಳಿತಿದ್ದ ಶಾಸಕ ಎಸ್‌ ಎನ್‌ ನಾರಾಯಣಸ್ವಾಮಿ ಕೆರಳಿದರು.

‘ನಿಮ್ಮಪ್ಪ ಭೂಗಳ್ಳ, ಯಾರಿಗೆ ಹೇಳ್ತಿಯಾ? ನಿಮ್ಮಪ್ಪನಿಗೆ ಹುಟ್ಟಿದ್ದರೆ ಸಾಬೀತು ಮಾಡು’ ಎಂದು ಸಂಸದ ಎಸ್‌ ಮುನಿಸ್ವಾಮಿ ಅವರಿಗೆ ಕಾಂಗ್ರೆಸ್ ಶಾಸಕ ಎಸ್‌ ಎನ್ ನಾರಾಯಣಸ್ವಾಮಿ ಏಕವಚನದಲ್ಲಿಯೇ ಸವಾಲು ಹಾಕಿದರು. ಇದರಿಂದ ಕೆರಳಿದ ಸಂಸದ ಎಸ್‌ ಮುನಿಸ್ವಾಮಿ ಭಾಷಣ ಪೀಠವನ್ನು ಬಿಟ್ಟು ಶಾಸಕರತ್ತ ನುಗ್ಗಿ ಬಂದರು. ಈ ವೇಳೆ ಅಲ್ಲಿಯೇ ಇದ್ದ ಪೊಲೀಸರು ಸಂಸದರನ್ನು ತಡೆದು, ವೇದಿಕೆಯಿಂದ ಹೊರಕ್ಕೆ ಎಳೆದೊಯ್ದರು.

ಈ ಘಟನೆಯ ವಿಡಿಯೋ ಸೋಷಿಯಲ್ ಮೀಡಿಯಾಗಳಲ್ಲಿ ಹರಿದಾಡಿದ್ದು, ವೈರಲ್ ಆಗಿದೆ. ಜನಪ್ರತಿನಿಧಿಗಳ ಈ ರೀತಿಯ ನಡೆಯನ್ನು ಖಂಡಿಸಿದ್ದಾರೆ.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!