Wednesday, September 18, 2024

ಪ್ರಾಯೋಗಿಕ ಆವೃತ್ತಿ

ಮನ್ಮುಲ್ ಅಧ್ಯಕ್ಷ ರಾಮಚಂದ್ರು ನೇತೃತ್ವದಲ್ಲಿ ಎಚ್.ಡಿ.ಕುಮಾರಸ್ವಾಮಿ ಜನ್ಮದಿನ ಆಚರಣೆ

ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿರವರ 64ನೇ ವರ್ಷದ ಜನ್ಮದಿನದ ಪ್ರಯುಕ್ತ ಮಂಡ್ಯ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಆಕಾಂಕ್ಷಿತ ಅಭ್ಯರ್ಥಿ ಹಾಗೂ ಮನ್ ಮುಲ್ ಅಧ್ಯಕ್ಷರಾದ ಬಿ.ಆರ್. ರಾಮಚಂದ್ರುರವರ ನೇತೃತ್ವದಲ್ಲಿ ಹಲವು ಜನಪರ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು.

ಮಂಡ್ಯ ನಗರದ ವಿ.ವಿ ರಸ್ತೆಯ ಗಣಪತಿ ದೇವಸ್ಥಾನದಲ್ಲಿ ಇಂದು ಬೆಳಿಗ್ಗೆ ಅಭಿಮಾನಿಗಳು ಹಾಗೂ ಕಾರ್ಯಕರ್ತರು ವಿಶೇಷ ಪೂಜೆ ಸಲ್ಲಿಸಿ,ಮಾಜಿ ಸಿಎಂ‌ ಎಚ್.ಡಿ.ಕುಮಾರಸ್ವಾಮಿ ಅವರ ಹೆಸರಿನಲ್ಲಿ ವಿಶೇಷ ಪೂಜೆ ಸಲ್ಲಿಸಿ ಶುಭಾಶಯ ಕೋರಿದರು.

nudikarnataka.com

ನಂತರ ಪ್ರೇರಣಾ ಟ್ರಸ್ಟ್ ನ ಮಕ್ಕಳೊಂದಿಗೆ ಕುಮಾರಸ್ವಾಮಿರವರ ಜನ್ಮದಿನ ಆಚರಿಸಿದರು.ತರುವಾಯಮಂಡ್ಯ ಜಿಲ್ಲಾ ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗಳಿಗೆ ಹಣ್ಣು ವಿತರಣೆ, ಹಾಗೂ ಮಮತೆಯ ಮಡಿಲು ಮೂಲಕ ಉಪಹಾರದ ವ್ಯವಸ್ಥೆ ಮಾಡಲಾಗಿತ್ತು.

ನೆಹರು ನಗರದ ಸರ್ಕಾರಿ ಶಾಲಾ ಮಕ್ಕಳಿಗೆ ಶ್ರೀ ಶಂಭು ಸೇವಾ ಟ್ರಸ್ಟ್ ವತಿಯಿಂದ ಉಚಿತ ಶಾಲಾ ಬ್ಯಾಗ್ ವಿತರಣೆ ಮಾಡಲಾಯಿತು.ಸೇವಾಕಿರಣ ವೃದ್ರಾಶ್ರಮದ ವೃದ್ಧರಿಗೆ ಬೆಡ್ ಶೀಟ್ ವಿತರಿಸಲಾಯಿತು.

nudikarnataka.com

ನಗರದ ಗ್ರೀನ್ ಪ್ಯಾಲೇಸ್ ಸಮುದಾಯ ಭವನದಲ್ಲಿ ಎಚ್.ಡಿ .ಕುಮಾರಸ್ವಾಮಿ ಜನ್ಮದಿನದ ಅಂಗವಾಗಿ ಸಾವಿರಾರು ಕಾರ್ಯಕರ್ತರು ಹಾಗೂ ಅಭಿಮಾನಿಗಳ ಸಮ್ಮುಖದಲ್ಲಿ ರಾಮಚಂದ್ರು ಅವರು ಬೃಹತ್ ಗಾತ್ರದ ಕೇಕ್ ಕತ್ತರಿಸುವ ಮೂಲಕ ಜನ್ಮದಿನ ಆಚರಣೆ ಮಾಡಿದರು.

ಈ ಸಂದರ್ಭದಲ್ಲಿ ಅಭಿಮಾನಿಗಳಿಗೆ, ಕಾರ್ಯಕರ್ತರುಗಳಿಗೆ ಬಾಡೂಟದ ಉಪಹಾರದ ವ್ಯವಸ್ಥೆಯನ್ನು ಬಿ.ಆರ್ ರಾಮಚಂದ್ರುರವರು ಏರ್ಪಡಿಸಿದ್ದರು.

ಈ ಸಂದರ್ಭದಲ್ಲಿ ಮನ್ ಮುಲ್ ಉಪಾಧ್ಯಕ್ಷ ಎಂ.ಎಸ್ ರಘುನಂದನ್, ಜೆಡಿಎಸ್ ಕಾರ್ಯಾಧ್ಯಕ್ಷ ಬೂದನೂರು ಸ್ವಾಮಿ, ನಗರಸಭೆ ಅಧ್ಯಕ್ಷ ಎಚ್‌.ಎಸ್. ಮಂಜು,ಮಾಜಿ ಸದಸ್ಯರಾದ ಕೆ‌.ಸಿ.ನಾಗಮ್ಮ, ಶಂಭು ಸೇವಾ ಟ್ರಸ್ಟ್ ಕಾರ್ಯದರ್ಶಿ ಬಿ.ಆರ್.ಸುರೇಶ್, ಗುತ್ತಿಗೆದಾರರಾದ ಹಿಟ್ಟನಹಳ್ಳಿ ಕೊಪ್ಪಲು ನಟರಾಜ್,ಬಾಲರಾಜ್ ಮುಖಂಡರಾದ ಹನಕೆರೆ ಕಿರಣ್, ಕನ್ನಲಿ ವಿಜಯ್, ಎಂ. ಆರ್. ಎಂ. ಮಂಜುನಾಥ್, ನಗರಸಭೆ ಸದಸ್ಯರು,ಸಾವಿರಾರು ಜೆಡಿಎಸ್ ಕಾರ್ಯಕರ್ತರು, ಅಭಿಮಾನಿಗಳು ಉಪಸ್ಥಿತರಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!