Friday, May 17, 2024

ಪ್ರಾಯೋಗಿಕ ಆವೃತ್ತಿ

ನಾಗಮಂಗಲ| ಚುಂಚಶ್ರೀಗಳ ಆಶೀರ್ವಾದ ಪಡೆದ ಮನ್ಸೂರ್ ಅಲಿಖಾನ್

ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ, ಕೇಂದ್ರದ ಮಾಜಿ ಸಚಿವ ಕೆ. ರೆಹಮಾನ್ ಖಾನ್ ಅವರ ಪುತ್ರ ಕೆ. ಮನ್ಸೂರ್ ಅಲಿಖಾನ್ ಇಂದು ನಾಗಮಂಗಲ ತಾಲ್ಲೂಕಿನ ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷ ಡಾ.ನಿರ್ಮಲಾನಂದನಾಥ ಸ್ವಾಮೀಜಿ ಅವರಿಂದ ಆಶೀರ್ವಾದ ಪಡೆದರು.

ಮುಂಬರುವ ಲೋಕಸಭಾ ಚುನಾವಣೆಗೆ ಬೆಂಗಳೂರು ಸೆಂಟ್ರಲ್ ಕ್ಷೇತ್ರದ ಅಭ್ಯರ್ಥಿಯಾಗಿ ಮನ್ಸೂರ್ ಅಲಿಖಾನ್ ಅವರನ್ನು ಕಾಂಗ್ರೆಸ್ ಹೈ ಕಮಾಂಡ್ ಘೋಷಣೆ ಮಾಡಿರುವ ಹಿನ್ನೆಲೆಯಲ್ಲಿ ಇಂದು ಆದಿಚುಂಚನಗಿರಿ ಮಹಾ ಸಂಸ್ಥಾನ ಮಠಕ್ಕೆ ತಂದೆ ಕೆ.ರೆಹಮಾನ್ ಜೊತೆ ಭೇಟಿ ನೀಡಿದ ಸಂದರ್ಭದಲ್ಲಿ ಅವರನ್ನು ಶ್ರೀ.ನಿರ್ಮಲಾನಂದ ನಾಥ ಸ್ವಾಮೀಜಿ ಆಶೀರ್ವದಿಸಿದರು.

ಈ ಸಂದರ್ಭದಲ್ಲಿ ಮಾಜಿ ಶಾಸಕರಾದ ಕೆ.ಬಿ. ಚಂದ್ರಶೇಖರ್, ಬಿ.ಪ್ರಕಾಶ್, ಕಾಂಗ್ರೆಸ್ ನಾಯಕರಾದ ವಿಜಯ್ ರಾಮೇಗೌಡ, ಬಿ. ಎಲ್.ದೇವರಾಜು, ಕಿಕ್ಕೇರಿ ಸುರೇಶ್, ಬಿ.ನಾಗೇಂದ್ರ ಕುಮಾರ್, ಹರಳಹಳ್ಳಿ ವಿಶ್ವನಾಥ್, ಸಿ.ಡಿ.ಗಂಗಾಧರ್, ಕೋಡಿಮಾರನಹಳ್ಳಿ ದೇವರಾಜು, ಚೇತನಾ ಮಹೇಶ್, ಡಿ. ಪ್ರೇಮಕುಮಾರ್, ಕೆ.ಸಿ. ಮಂಜುನಾಥ್, ಹೆಚ್.ಎನ್. ಪ್ರವೀಣ್, ಪುರಸಭೆ ಮಾಜಿ ಅಧ್ಯಕ್ಷ ಕೆ. ಗೌಸ್ ಖಾನ್ ಮತ್ತಿತರರು ಉಪಸ್ಥಿತರಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!