Saturday, May 18, 2024

ಪ್ರಾಯೋಗಿಕ ಆವೃತ್ತಿ

ಮದ್ದೂರು| ಮಾರಸಿಂಗನಹಳ್ಳಿ ಡೇರಿ ಅಧ್ಯಕ್ಷರಾಗಿ ಪುಟ್ಟಸ್ವಾಮಿ ಆಯ್ಕೆ

ವರದಿ: ಪ್ರಭು ವಿ ಎಸ್

ಮದ್ದೂರು ತಾಲೂಕಿನ ಮಾರಸಿಂಗನಹಳ್ಳಿ ಗ್ರಾಮದ ಹಾಲು ಉತ್ಪಾದಕರ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಎಂ.ಪುಟ್ಟಸ್ವಾಮಿ ಮತ್ತು ಉಪಾಧ್ಯಕ್ಷರಾಗಿ ಶೋಭಾ ಗೂಳಿಗೌಡ ಅವಿರೋಧ ಆಯ್ಕೆಯಾದರು.

ಸಂಘದ ಕಚೇರಿಯಲ್ಲಿ ಸೋಮವಾರ ನಡೆದ ಚುನಾವಣೆಗೆ ಅಧ್ಯಕ್ಷ ಸ್ಥಾನಕ್ಕೆ ಎಂ ಪುಟ್ಟಸ್ವಾಮಿ, ಉಪಾಧ್ಯಕ್ಷ ಸ್ಥಾನಕ್ಕೆ ಶೋಭಾ ಗೂಳಿಗೌಡ ಅವರನ್ನು ಹೊರತುಪಡಿಸಿ ಬೇರೆ ಯಾರು ನಾಮಪತ್ರ ಸಲ್ಲಿಸದ ಕಾರಣ ಚುನಾವಣಾಧಿಕಾರಿ ಸುಧಾಕರ್ ಅವರು ಅವಿರೋಧ ಆಯ್ಕೆಯನ್ನು ಪ್ರಕಟಿಸಿದರು.

ನೂತನ ಅಧ್ಯಕ್ಷ ಹಾಗೂ ಉಪಾಧ್ಯಕ್ಷರನ್ನು ಸಂಘದ ನಿರ್ದೇಶಕರು ಸ್ಥಳೀಯ ಮುಖಂಡರು ಅಭಿನಂದಿಸಿ ಗೌರವಿಸಿದರು, ನೂತನ ಅಧ್ಯಕ್ಷ ಎಂ ಪುಟ್ಟಸ್ವಾಮಿ ಮಾತನಾಡಿ, ಸಹಕಾರ ಸಂಘದ ಶ್ರೇಯೋಭಿವೃದ್ಧಿಗೆ ಶಕ್ತಿ ಮೀರಿ ಶ್ರಮಿಸುವ ಜೊತೆಗೆ ಉತ್ಪಾದಕರು ಗುಣಮಟ್ಟದ ಹಾಲು ಪೂರೈಕೆ ಮಾಡುವುದರ ಮೂಲಕ ಸಂಘದ ಅಭಿವೃದ್ಧಿಗೆ ಕೈಜೋಡಿಸುವಂತೆ ಮನವಿ ಮಾಡಿದರು. ತಮ್ಮನ್ನು ಅಧ್ಯಕ್ಷರನ್ನಾಗಿ ಆಯ್ಕೆಗೊಳಿಸಿದ ಸಂಘದ ನಿರ್ದೇಶಕರು ಸ್ಥಳೀಯ ಮುಖಂಡರು ಮತ್ತು ಸದಸ್ಯರಿಗೆ ಅಭಿನಂದನೆ ಸಲ್ಲಿಸಲಾಗುವುದು ಎಂದರು.

ಒಕ್ಕೂಟದ ವತಿಯಿಂದ ಸಿಗುವ ಹಲವು ಸೌಲಭ್ಯಗಳನ್ನು ಪ್ರಾಮಾಣಿಕವಾಗಿ ಅರ್ಹ ಫಲಾನುಭವಿಗಳಿಗೆ ತಲುಪಿಸಲು ಯೋಜನೆ ರೂಪಿಸುವುದಾಗಿ ಮತ್ತು ಉತ್ಪಾದಕರು ಕಾಲಕಾಲಕ್ಕೆ ರಾಸುವಿಮೆ, ಕಾಲುಬಾಯಿ ಜ್ವರ ಲಸಿಕೆ ಇನ್ನಿತರ ಸೌಲಭ್ಯಗಳನ್ನು ಪಡೆದುಕೊಂಡು ಮತ್ತಷ್ಟು ಹಾಲು ಉತ್ಪಾದನೆಯಲ್ಲಿ ಪ್ರಗತಿ ಸಾಧಿಸಬೇಕೆಂದು ಕಿವಿಮಾತು ಹೇಳಿದರು.

ಈ ಸಂದರ್ಭದಲ್ಲಿ ನಿರ್ದೇಶಕರಾದ ಅಪ್ಪಾಜಿ ಗೌಡ, ಆನಂದಮ್ಮ, ಕೆ.ಟಿ.ಲಕ್ಷ್ಮಿ, ಸೋಮಶೇಖರ್, ದೇವಿರಮ್ಮ, ಸವಿತಾ, ಶಶಿಕಲಾ, ಅಪ್ಪಾಜಿ, ಶ್ರೀಕಂಠ ಗೂಳಿಗೌಡ, ಮುಖಂಡರಾದ ಮಹಾರಸಿಂಗನಹಳ್ಳಿ ರಾಮಚಂದ್ರು, ಕೃಷ್ಣಪ್ಪ, ಮರಿಕೆಂಚಯ್ಯ, ಪುಟ್ಟಸ್ವಾಮಿ, ರಾಜಣ್ಣ, ಉಮೇಶ್, ನಾಗೇಶ್, ಗೋಳಿಗೌಡ ಹಾಗೂ ನಂಜೇಶ್ ಉಪಸ್ಥಿತರಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!