ಮಂಡ್ಯ ಲೋಕಸಭಾ ಚುನಾವಣೆಗೆ ಬಿಜೆಪಿ ಅಭ್ಯರ್ಥಿಯಾಗಿ ರೈತ ಮುಖಂಡ ಕೆ.ಎಸ್.ನಂಜುಂಡೇಗೌಡ ಅವರನ್ನು ಘೋಷಿಸುವಂತೆ ಅವರ ಬೆಂಬಲಿಗರು ಒತ್ತಾಯಿಸಿದ್ದಾರೆ.
ಶ್ರೀರಂಗಪಟ್ಟಣದ ಪ್ರವಾಸಿ ಮಂದಿರದಲ್ಲಿ ಸಭೆ ಸೇರಿ ನಿರ್ಧಾರ ಕೈಗೊಂಡ ಬೆಂಬಲಿಗರು, ಸುಮಾರು 42 ವರ್ಷಗಳಿಂದ ರಾಜಕೀಯ ಮಾಡಿಕೊಂಡು ಬರುತ್ತಿರುವ ಹೋರಾಟಗಾರ ನಂಜುಂಡೇಗೌಡರಿಗೆ ಈ ಬಾರಿ ಅವಕಾಶ ನೀಡಬೇಕೆಂದು ಒತ್ತಾಯಿಸಿದರು.
ಸಭೆಯ ನಂತರ ಮಾತನಾಡಿದ ಕೆ.ಎಸ್.ನಂಜುಂಡೇಗೌಡ, ಶ್ರೀರಂಗಪಟ್ಟಣದ ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ಭ್ರಷ್ಟಾಚಾರ ತಾಂಡವವಾಡುತ್ತಿದೆ, ಲಂಚವಿಲ್ಲದೇ ಯಾವುದೇ ಕೆಲಸ ನಡೆಯುತ್ತಿಲ್ಲ, ಭಷ್ಟ್ರ ಅಧಿಕಾರಿಗಳನ್ನು ಶಾಸಕರು ಸರಿ ದಾರಿಗೆ ತರಬೇಕು, ಇಲ್ಲವಾದರೂ ಹೋರಾಟ ನಡೆಸಬೇಕಾಗುತ್ತದೆ ಎಂದು ಎಚ್ಚರಿಸಿದರು.