ಮಂಡ್ಯ ನಗರದ ಕುವೆಂಪು ನಗರದಲ್ಲಿರುವ ಪ್ರಶಾಂತ ಬಲಮುರಿ ಗಣಪತಿ ದೇವಾಲಯದ ಅಭಿವೃದ್ಧಿ ಕಾಮಗಾರಿಗೆ ಶಾಸಕ ರವಿಕುಮಾರ್ ಭೂಮಿಪೂಜೆ ನೆರವೇರಿಸಿದರು.
ಬಳಿಕ ಮಾತನಾಡಿದ ಅವರು, ದೇವಾಲಯ ಅಭಿವೃದ್ಧಿಗೆ ಸ್ಥಳೀಯ ಶಾಸಕರ ಪ್ರದೇಶ ಅಭಿವೃದ್ಧಿ ನಿಧಿಯಿಂದ 5 ಲಕ್ಷ ರೂ. ಅನುದಾನವನ್ನು ನೀಡಲಾಗುತ್ತಿದೆ, ಸಮಿತಿಯವರು ಮತ್ತಷ್ಟು ಅಭಿವೃದ್ಧಿ ಕಾರ್ಯಕ್ಕಾಗಿ ಒತ್ತಾಯ ಮಾಡಿದ ಹಿನ್ನೆಲೆಯಲ್ಲಿ ಮುಂದಿನ ದಿನಗಳಲ್ಲಿ 5 ಲಕ್ಷ ರೂ. ಗಳನ್ನು ಅನುದಾನದಲ್ಲಿ ನೀಡಲಾಗುವುದು ಎಂದು ಭರವಸೆ ನೀಡಿದರು.
ಮಂಡ್ಯ ನಗರದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಾಗಿ 100 ಕೋಟಿ ರೂ.ಗಳನ್ನು ಸರ್ಕಾರ ಬಿಡುಗಡೆಗೊಳಿಸಿದೆ, ಮತಷ್ಟು ಅಭಿವೃದ್ಧಿಗಾಗಿ ಮುಂದಿನ ದಿನಗಳಲ್ಲಿ 100 ಕೋಟಿ ರೂಗಳನ್ನು ಬಿಡುಗಡೆಗೊಳಿಸಲು ಕ್ರಿಯಾ ಯೋಜನೆ ತಯಾರಿಸಲಾಗುತ್ತಿದೆ ಎಂದು ತಿಳಿಸಿದರು.
ಒಟ್ಟು 200 ಕೋಟಿ ರೂ.ಗಳ ವೆಚ್ಚದಲ್ಲಿ ಮಂಡ್ಯ ನಗರವನ್ನು ಅಭಿವೃದ್ಧಿ ಪಥದಲ್ಲಿ ಕೊಂಡೊಯ್ಯಲಾಗುವುದು ಮತ್ತು ಹೊಸ ಬದಲಾವಣೆಯ ಸ್ವರೂಪವನ್ನು ನಾಗರಿಕರು ಕಾಣಬಹುದು. ನಗರ ವ್ಯಾಪ್ತಿಯಲ್ಲಿ ಬರುವ ಪ್ರಮುಖ ರಸ್ತೆಗಳನ್ನು ಕೂಡ ಅಭಿವೃದ್ಧಿ ಪಡಿಸಲು ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಪತ್ರಕರ್ತರ ಸಂಘದ ಅಧ್ಯಕ್ಷ ಬಿ. ಪಿ ಪ್ರಕಾಶ್, ಶ್ರೀ ಪ್ರಶಾಂತ ಬಲಮುರಿ ಗಣಪತಿ ದೇವಸ್ಥಾನ ಸಮಿತಿಯ ಅಧ್ಯಕ್ಷ ನಿವೃತ್ತ ಪ್ರಾಂಶುಪಾಲ ಪುಟ್ಟಸ್ವಾಮಿಗೌಡ, ಎಂ ಕೃಷ್ಣ, ಕುಮಾರಸ್ವಾಮಿ, ವಕೀಲ ಶಿವರಾಮು, ಸಂಪತ್, ರಾಜೇಗೌಡ, ಅಪ್ಪಾಜಪ್ಪ, ಕೆ. ಪಿ.ಶಿವಲಿಂಗಯ್ಯ, ಕಲ್ಲಹಳ್ಳಿ ಆನಂದ್ , ಲಕ್ಷ್ಮಣಗೌಡ, ಹೊಸಹಳ್ಳಿ ಶೇಖರ್ ಉಪಸ್ಥಿತರಿದ್ದರು.