Friday, September 20, 2024

ಪ್ರಾಯೋಗಿಕ ಆವೃತ್ತಿ

ಎಸೆಸ್ಸೆಲ್ಸಿ ಫಲಿತಾಂಶ| ರಾಜ್ಯಮಟ್ಟದಲ್ಲಿ ತೃತೀಯ ಸ್ಥಾನ ಪಡೆದ ನವನೀತ್ ಗೆ ಶಾಸಕರ ಅಭಿನಂದನೆ

ಎಸ್‌‌.ಎಸ್‌.ಎಲ್.ಸಿ ಪರೀಕ್ಷೆಯಲ್ಲಿ 625ಕ್ಕೆ 623ಅಂಕಗಳನ್ನು ಪಡೆದು ರಾಜ್ಯಕ್ಕೆ ಮೂರನೇ ಸ್ಥಾನ ಹಾಗೂ ಮಂಡ್ಯ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದಿರುವ ಕನ್ನಲಿ ಗ್ರಾಮದ ವಿದ್ಯಾರ್ಥಿ ನವನೀತ್ ಅವರನ್ನು ಮಂಡ್ಯ ಶಾಸಕ ರವಿಕುಮಾರ್ ಗಣಿಗ ಅವರ ನಿವಾಸಕ್ಕೆ ತೆರಳಿ ಅಭಿನಂದಿಸಿದರು.

ಮಂಡ್ಯ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕಸಬಾ ಹೋಬಳಿಯ ಕನ್ನಲಿ ಗ್ರಾಮದ ಚನ್ನೇಗೌಡರ ಸುಪುತ್ರ ನವನೀತ್ ಕೆ.ಸಿ, ರಾಜ್ಯಮಟ್ಟದಲ್ಲಿ ಇಂತಹ ಸಾಧನೆ ಮಾಡಿರುವುದು ಹೆಮ್ಮೆಯ ವಿಷಯ, ಮುಂದಿನ ಅವರ ಭವಿಷ್ಯ ಉಜ್ವಲವಾಗಿರಲಿ ಎಂದು ರವಿಕುಮಾರ್ ಶುಭಹಾರೈಸಿದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!