ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಪ್ರಾದೇಶಿಕ ಕಛೇರಿ ಮಂಡ್ಯ ಇವರ ವತಿಯಿಂದ ಗಣೇಶ ಮೂರ್ತಿ ವಿಸರ್ಜನೆ ಮಾಡಲು ಮೊಬೈಲ್ ಸಂಚಾರಿ ವಾಹನ ಸೌಲಭ್ಯ ವ್ಯವಸ್ಥೆ ಮಾಡಲಾಗಿದೆ.
ಮಂಡ್ಯ ನಗರದಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆ ಮಾಡಿರುವ ಸಾರ್ವಜನಿಕರು ಸಂಚಾರಿ ವಾಹನ ಸೌಲಭ್ಯದ ಸದುಪಯೋಗ ಪಡೆದುಕೊಂಡು ಗಣೇಶ ಮೂರ್ತಿ ವಿಸರ್ಜಿಸಲು ಅವಕಾಶ ಕಲ್ಪಿಸಬೇಕೆಂದು
ಉಪ ಪರಿಸರ ಅಧಿಕಾರಿ ಸಿ. ಭವ್ಯ ತಿಳಿಸಿದರು.
ಈ ಸಂದರ್ಭದಲ್ಲಿ ಪರಿಸರ ನಿಯಂತ್ರಣ ಮಂಡಳಿಯ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.