ಪ್ರಧಾನಮಂತ್ರಿ ನರೇಂದ್ರ ಮೋದಿಯವರ 74ನೇ ಜನ್ಮದಿನದ ಅಂಗವಾಗಿ ಬಿಜೆಪಿ ಕಾರ್ಯಕರ್ತರು ಮಂಡ್ಯ ನಗರದ ಕಾಳಿಕಾಂಭ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿ, ತಡೆ ಒಡೆಸಿದರು.
ಇಂದು ಬೆಳಿಗ್ಗೆ ಬಿಜೆಪಿ ಜಿಲ್ಲಾಧ್ಯಕ್ಷ ಸಿ.ಪಿ.ಉಮೇಶ್ ನೇತೃತ್ವದಲ್ಲಿ ಕಾಳಿಕಾಂಭ ದೇವಸ್ಥಾನಕ್ಕೆ ಬಂದ ಬಿಜೆಪಿ ಕಾರ್ಯಕರ್ತರು ಕಾಳಿಕಾಂಬ ದೇವಿಗೆ ಪೂಜೆ ಸಲ್ಲಿಸಿ ಪ್ರಧಾನಿ ನರೇಂದ್ರ ಮೋದಿಯವರಿಗೆ ಶುಭ ಕೋರಿದರು.
ನಂತರ ಜಯಚಾಮರಾಜೇಂದ್ರ ವೃತ್ತದಲ್ಲಿ ಮೋದಿಯವರ ಕಟೌಟ್ ಗೆ ಬಿಜೆಪಿ ಜಿಲ್ಲಾಧ್ಯಕ್ಷ ಉಮೇಶ್, ಮುಖಂಡರಾದ ಅಶೋಕ್ ಜಯರಾಂ ಹಾಗೂ ಬಿಜೆಪಿ ಕಾರ್ಯಕರ್ತರು ಹಾಲಿನ ಅಭಿಷೇಕ ಮಾಡಿ ಸಿಹಿ ಹಂಚಿ ಸಂಭ್ರಮಿಸಿದರು.
ಈ ಸಂದರ್ಭದಲ್ಲಿ ನಗರಸಭಾ ಸದಸ್ಯ ಅರುಣ್ ಕುಮಾರ್, ಮುಖಂಡರಾದ ರಮೇಶ್,ಶ್ರೀಧರ್, ವಿವೇಕ್,ಡಾ.ಸದಾನಂದ,ಮುನಿರಾಜು ಮತ್ತಿತರರಿದ್ದರು.
ಭೋಜನ ವ್ಯವಸ್ಥೆ
ಪ್ರದಾನ ಮಂತ್ರಿ ನರೇಂದ್ರ ಮೋದಿರವರ 74ನೇ ಜನ್ಮ ದಿನಾಚರಣೆ ಅಂಗವಾಗಿ ಮಂಡ್ಯನಗರದ ಸ್ವರ್ಣಸಂದ್ರ ಬಡಾವಣೆಯಲ್ಲಿರುವ ಪ್ರೇರಣ ವಿಶೇಷ ಚೇತನ ನಿಲಯದಲ್ಲಿ ಮಿಷನ್ ಮೋದಿ ಅವರ ವತಿಯಿಂದ ಇಂದು ವಿಶೇಷ ಮಕ್ಕಳಿಗೆ ಭೋಜನ ವ್ಯವಸ್ಥೆ ಮಾಡಲಾಗಿತ್ತು.
ಈ ಸಂದರ್ಭದಲ್ಲಿ ಗಿರೀಶ್ ರಾಜ್ ರಾಷ್ಟ್ರೀಯ ಕಾರ್ಯದರ್ಶಿ,ಜಿಲ್ಲಾಧ್ಯಕ್ಷ ಡಾ.ಕಪನೀಗೌಡ.ಜಿಲ್ಲಾ ಕಾರ್ಯದರ್ಶಿ,ಶಿವಕೆಂಪಯ್ಯ,ಜಯರಾಂ,ಶಿವರುದ್ರ,ಗುರುಮೂರ್ತಿ ಕುಮಾರ್,ಪ್ರೇರಣ ಶಾಲೆಯ ರವಿಕುಮಾರ್ ಮೊದಲಾದವರು ಉಪಸ್ಥಿತರಿದ್ದರು.