ಮಂಡ್ಯ ತಾಲ್ಲೂಕು ಸೇರಿದಂತೆ ಹಲವೆಡೆ ಮಳೆಹಾನಿ ಪ್ರದೇಶಗಳಿಗೆ ಸೆಪ್ಟೆಂಬರ್ 1 ರಂದು ಸಂಸದೆ ಸುಮಲತಾ ಅಂಬರೀಶ್ ಅವರು ಭೇಟಿ ನೀಡುವ ಕಾರ್ಯಕ್ರಮ ಮುಂದೂಡಲಾಗಿದೆ.
ಕಳೆದ ಕೆಲ ದಿನಗಳಿಂದ ಸುರಿದ ಭಾರಿ ಮಳೆಯಿಂದ ರಾಮನಗರ ಸಮೀಪ ಹಾನಿಯಾಗಿರುವ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯನ್ನು ಸರಿಪಡಿಸುವ ನಿಟ್ಟಿನಲ್ಲಿ NHAI ಅಧಿಕಾರಿಗಳು ಕಾರ್ಯನಿರತರಾಗಿರುವ ಹಿನ್ನೆಲೆಯಲ್ಲಿ ದಿನಾಂಕ: 01-09-2022 ರಂದು ಮಾನ್ಯ ಮಂಡ್ಯ ಲೋಕಸಭಾ ಸದಸ್ಯರಾದ ಸುಮಲತಾ ಅಂಬರೀಶ್ ರವರು ಕೈಗೊಳ್ಳಬೇಕಾಗಿದ್ದ ಮೈಸೂರು-ಬೆಂಗಳೂರು ಹೆದ್ದಾರಿ ಪರಿವೀಕ್ಷಣೆಯನ್ನು ರದ್ದುಪಡಿಸಿ, ಮುಂದೂಡಲಾಗಿರುತ್ತದೆ ಎಂದು ಪ್ರಕಟಣೆ ತಿಳಿಸಿದೆ.