Thursday, September 19, 2024

ಪ್ರಾಯೋಗಿಕ ಆವೃತ್ತಿ

ಮಂಡ್ಯ | ಚಾಕುವಿನಿಂದ ಇರಿದು ಪತಿಯಿಂದಲೇ ಪತ್ನಿಯ ಕೊಲೆ

ಕೌಟುಂಬಿಕ‌ ಕಲಹದ ಹಿನ್ನಲೆಯಲ್ಲಿ ಪತಿಯೇ ಪತ್ನಿಗೆ ಚಾಕುವಿನಿಂದ ಇರಿದು ಕೊಲೆಗೈದಿರುವ ಘಟನೆ  ಮಂಡ್ಯ ತಾಲ್ಲೂಕಿನ ಯಲಿಯೂರು‌ ಗೇಟ್ ಬಳಿ ಜರುಗಿದೆ.

ಘಟನೆಯಲ್ಲಿ 40 ವರ್ಷದ ಮನುಜ ಮೃತಪಟ್ಟವರು. ಗುರುವಾರ ಸಂಜೆ ಮನೆಯಲ್ಲಿ ಪತಿ ರಾಮಚಂದ್ರ ಹಾಗೂ ಪತ್ನಿ ನಡುವಿನ ಗಲಾಟೆ ವಿಕೋಪಕ್ಕೆ ತಿರುಗಿ ಚಾಕುವಿನಿಂದ ಹಿರಿದು ಹತ್ಯೆ ಮಾಡಿದ್ದಾನೆ. ಘಟನೆಯಿಂದ ರಕ್ತದ ಮಡುವಿನಲ್ಲಿ ಬಿದ್ದ ಮನುಜ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ವಿಷಯ ತಿಳಿದು ಸ್ಥಳಕ್ಕೆ ಧಾವಿಸಿದ ಮಂಡ್ಯ ಗ್ರಾಮಾಂತರ ಠಾಣೆ ಪೊಲೀಸರು ಆರೋಪಿ ರಾಮಚಂದ್ರನನ್ನು‌ ಬಂಧಿಸಿ ದೂರು ದಾಖಲಿಸಿಕೊಂಡಿದ್ದಾರೆ. ಶವವನ್ನು ಮಹಜರು ನಡೆಸಿ‌ ಮಂಡ್ಯದ ಮಿಮ್ಸ್ ಶವಾಗಾರಕ್ಕೆ ಸಾಗಿಸಲಾಗಿದೆ.

ಸ್ಥಳಕ್ಕೆ ಎಎಸ್ಪಿ ತಿಮ್ಮಯ್ಯ, ಡಿವೈಎಸ್ಪಿ ಓಂಪ್ರಕಾಶ್, ಪೊಲೀಸ್ ಇನ್ಸ್’ಪೆಕ್ಟರ್ ಸಿದ್ದಪ್ಪ ಭೇಟಿ ನೀಡಿ ಪರಿಶೀಲನೆ ನಡೆಸಿದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!