ಅಪ್ರಾಪ್ತ ವಯಸ್ಸಿನ ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪದ ಮೇಲೆ ಪ್ರೋಕ್ಸೋ ಕಾಯ್ದೆಯಡಿ ಬಂಧಿತರಾಗಿರುವ ಮುರುಘಾ ರಾಜೇಂದ್ರ ಮಠದ ಶಿವಯೋಗಿ ಶ್ರೀಗಳ ಜಾಮೀನು ಅರ್ಜಿ ವಿಚಾರಣೆಯನ್ನು ನಾಳೆಗೆ ಮುಂದೂಡಲಾಗಿದೆ.
ಚಿತ್ರದುರ್ಗದ 2ನೇ ಹೆಚ್ಚುವರಿ ಸತ್ರ ನ್ಯಾಯಾಲಯದಲ್ಲಿ ಶ್ರೀಗಳು ಸೇರಿದಂತೆ 3ನೇ ಆರೋಪಿ ಬಸವಾದಿತ್ಯ,, 4ನೇ ಆರೋಪಿ ಮಠದ ಕಾರ್ಯದರ್ಶಿ ಪರಮಶೀವಯ್ಯ, 5ನೇ ಆರೋಪಿ ವಕೀಲ ಗಂಗಾಧರಯ್ಯ ಇವರು ಸಲ್ಲಿಸಿರುವ ಜಾಮೀನು ಅರ್ಜಿಗಳ ವಿಚಾರಣೆಯೂ ನಾಳೆಯೇ ನಡೆಯಲಿದೆ.
ಸಂತ್ರಸ್ತ್ರೆಯರ ಪರ ವಕೀಲರು ನಾಳೆಯೇ ಆಕ್ಷೇಪಣೆ ಅರ್ಜಿ ಸಲ್ಲಿಸಲಿದ್ದು, ನಂತರ ಆರೋಪಿಗಳ ಜಾಮೀನು ಅರ್ಜಿಯ ವಿಚಾರಣೆ ಜರುಗಲಿದೆ.