ಮಂಡ್ಯದ ನೆಲದನಿ ಬಳಗದ ವತಿಯಿಂದ ಕುವೆಂಪು ಜಯಂತಿ ಹಾಗೂ ವಿಶ್ವಮಾನವ ದಿನಾಚರಣೆ ಅಂಗವಾಗಿ ಮೈಸೂರು ರಂಗಾಯಣ ಅಭಿನಯಿಸುವ ಪಿ.ಲಂಕೇಶ್ ರಚನೆಯ ‘ಮುಟ್ಟಿಸಿಕೊಂಡವನು’ ನಾಟಕ ಪ್ರದರ್ಶನವು ಡಿ.29ರಂದು ಸಂಜೆ 6 ಗಂಟೆಗೆ ಮಂಡ್ಯನಗರದ ಪಿಇಎಸ್ ಕಾಲೇಜಿನ ಸ್ವಾಮಿ ವಿವೇಕಾನಂದ ರಂಗಮಂದಿರದಲ್ಲಿ ನಡೆಯಲಿದೆ.
ನಂದಿನಿ ಕೆ.ಆರ್.ನಾಟಕ ನಿರ್ದೇಶನ ಮಾಡಿದ್ದು, ಮಹೇಶ್ ಕಲ್ಲತ್ತಿ ಬೆಳಕಿನ ಸಂಯೋಜನೆ ಮಾಡಿದ್ದು ಪ್ರಶಾಂತ್ ಹಿರೇಮಠ್ ಸಂಗೀತ ನೀಡಿದ್ದಾರೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಕಾರದಲ್ಲಿ ಪ್ರದರ್ಶನ ನಡೆಯಲಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ರಂಗಾಸಕ್ತರು ಆಗಮಿಸಿ ನಾಟಕ ವೀಕ್ಷಣೆ ಮಾಡುವಂತೆ ನೆಲದನಿ ಬಳಗದ ಅಧ್ಯಕ್ಷ ಮಂಗಲ ಲಂಕೇಶ್ ಮನವಿ ಮಾಡಿದ್ದಾರೆ. ಹೆಚ್ಚಿನ ವಿವರಗಳಿಗೆ ಮೊ. 9620174111, 9740255946 ಸಂಪರ್ಕಿಸಬಹುದು.