Thursday, September 19, 2024

ಪ್ರಾಯೋಗಿಕ ಆವೃತ್ತಿ

ಮೈಷುಗರ್ ಪ್ರೌಢಶಾಲೆಯಲ್ಲಿ ಗುರುವಂದನಾ ಕಾರ್ಯಕ್ರಮ

ಮಂಡ್ಯದ ಮೈಷುಗರ್ ಪ್ರೌಢಶಾಲೆಯಲ್ಲಿ ಹಿರಿಯ ವಿದ್ಯಾರ್ಥಿಗಳ ಸಂಘದ ವತಿಯಿಂದ ಸರ್ವ ಸದಸ್ಯರ ಸಭೆ ಹಾಗೂ ಗುರುವಂದನಾ ಕಾರ್ಯಕ್ರಮ ನಡೆಯಿತು.

ಸಂಘದ ಕಾರ್ಯದರ್ಶಿ ಡಾ.ಕೆ.ಎಂ. ಶಿವಕುಮಾರ್ ವಾರ್ಷಿಕ ವರದಿ ಮಂಡಿಸಿದರು.

ಇದೇ ಸಂದರ್ಭದಲ್ಲಿ ಶಾಲೆಯ ಹಿರಿಯ ನಿವೃತ್ತ ಶಿಕ್ಷಕರಾದ ವಿ.ಉಮ, ಕೆ ಹೊಂಬಯ್ಯ, ಎಂ.ಡಿ.ಮಹದೇವಪ್ಪ ಅವರನ್ನು ಹಿರಿಯ ವಿದ್ಯಾರ್ಥಿಗಳು ಗೌರವಿಸಿ ಅಭಿನಂದಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಸ್‌.ಸಿ ಸತ್ಯನಾರಾಯಣರಾವ್ ರವರು ವಹಿಸಿದ್ದರು.

ಶಾಲೆಯ ಆಡಳಿತಾಧಿಕಾರಿ ಹಾಗೂ ನಿವೃತ್ತ ಮುಖ್ಯ ಶಿಕ್ಷಕರಾದ ಟಿ.ರಮೇಶ್, ಸಂಘದ ವ್ಯವಸ್ಥಾಪಕರಾದ ಶ್ರೀನಿಧಿ ಸೇರಿದಂತೆ ಹೆಚ್ಚಿನ ಸಂಖ್ಯೆಯಲ್ಲಿ ಸದಸ್ಯರುಗಳು ಸಭೆಯಲ್ಲಿ ಹಾಜರಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!