Sunday, October 20, 2024

ಪ್ರಾಯೋಗಿಕ ಆವೃತ್ತಿ

ಮೈಷುಗರ್ ಕಬ್ಬು ನುರಿಸುವ ಕೆಲಸಕ್ಕೆ ತೊಂದರೆಯಾಗಿಲ್ಲ – ಡಾ.ಹೆಚ್.ಎಲ್ ನಾಗರಾಜ್

ಮಂಡ್ಯದ ಮೈಷುಗರ್ ಸಕ್ಕರೆ ಕಾರ್ಖಾನೆಯಲ್ಲಿ ಕಬ್ಬು ನುರಿಯುವ ಕೆಲಸ ನಡೆಯುತ್ತಿದ್ದು, ರೈತರು ಯಾವುದೇ ವದಂತಿಗಳಿಗೆ ಕಿವಿಕೊಡಬಾರದು ಎಂದು ಅಪರ ಜಿಲ್ಲಾಧಿಕಾರಿ ಡಾ: ಹೆಚ್.ಎಲ್ ನಾಗರಾಜ್ ತಿಳಿಸಿದ್ದಾರೆ‌.

ವಿದ್ಯುತ್ ನಿಲುಗಡೆಯಿಂದ ಕೆಲವು ಗಂಟೆಗಳು‌ ಮಾತ್ರ ಕಬ್ಬು ನುರಿಸುವ ಕೆಲಸಕ್ಕೆ ತೊಂದರೆಯಾಗಿದ್ದು, ಅದನ್ನು ಹೊರತುಪಡಿಸಿದರೆ ಕಬ್ಬು ನುರಿಸುವ ಕೆಲಸಕ್ಕೆ ಯಾವುದೇ ರೀತಿಯ ತೊಂದರೆಯಾಗಿಲ್ಲ, ಕಾರ್ಖಾನೆಯ ಸಿಬ್ಬಂದಿಗಳು ಕಬ್ಬು ನುರಿಸುವ ಕೆಲಸದಲ್ಲಿ ನಿರತರಾಗಿದ್ದಾರೆ‌. ಕಬ್ಬು ಖರೀದಿ ಕ್ಷೇತ್ರ ಅಧಿಕಾರಿಗಳು ಕಬ್ಬು ಖರೀದಿ ಕೆಲಸ ನಿರ್ವಹಿಸುತ್ತಿದ್ದು, ರೈತರು ಚಿಂತೆ ಮಾಡದೇ ಮೈಷುಗರ್ ಕಾರ್ಖಾನೆಗೆ ಕಬ್ಬು ಸರಬರಾಜು ಮಾಡುವಂತೆ ಪ್ರಕಟಣೆಯಲ್ಲಿ ಕೋರಿದ್ದಾರೆ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!