ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರ ನಿರ್ದೇಶನದಂತೆ ಮೈಷುಗರ್ ಸಕ್ಕರೆ ಕಾರ್ಖಾನೆಯನ್ನು ಜುಲೈ ಅಂತ್ಯದಲ್ಲಿ ಅಥವಾ ಆಗಸ್ಟ್ ಮೊದಲ ವಾರದಲ್ಲಿ ಪ್ರಾರಂಭಿಸಬೇಕಿರುವ ಹಿನ್ನಲೆಯಲ್ಲಿ ಶೀಘ್ರ ದುರಸ್ತಿ ಕೆಲಸಗಳು ಪೂರ್ಣಗೊಳಿಸಬೇಕೆಂದು ಜಿಲ್ಲಾಧಿಕಾರಿ ಎಸ್.ಅಶ್ವತಿ ಸೂಚನೆ ನೀಡಿದರು. ಅವರಿಂದು ಮೈಷುಗರ್ ಕಾರ್ಖಾನೆಗೆ ಭೇಟಿ ನೀಡಿ ಅಧಿಕಾರಿಗಳ ಸಭೆ ನಡೆಸಿ ಕಾರ್ಖಾನೆಯ ದುರಸ್ತಿ ಕೆಲಸಗಳ ಪರಿಶೀಲನೆ ನಡೆಸಿದರು.
ಬಾಯ್ಲರ್ ಸರಿಪಡಿಸುವ ಕಾರ್ಯಕ್ಕೆ ಆಸಕ್ತಿ ಹೊಂದಿರುವ ಮೂರು ಸಂಸ್ಥೆ ಗಳಿದ್ದು, ದುರಸ್ತಿಗೆ ಬೇಕಿರುವ ವಸ್ತುಗಳನ್ನು ಅವರೊಂದಿಗೆ ಚರ್ಚಿಸಿ, ಶೀಘ್ರವಾಗಿ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಈಗಾಗಲೇ ಸಕ್ಕರೆ ಕಾರ್ಖಾನೆ ಕೆಲಸಗಳಿಗೆ ಸಂಬಂಧಿಸಿದಂತೆ 3.75 ಕೋಟಿ ರೂ. ಹಣ ಬಿಡುಗಡೆಯಾಗಿದೆ. 16.60 ಕೋಟಿ ರೂ.ಆರ್ಥಿಕ ಇಲಾಖೆಯಿಂದ ಬಿಡುಗಡೆ ಹಂತದಲ್ಲಿದೆ. ದುರಸ್ತಿ ಕೆಲಸಗಳು ಗುಣಮಟ್ಟದಿಂದ ಕೂಡಿರಬೇಕು, ಕೆಲಸಗಳು ನಿಗದಿತ ಅವಧಿಯಲ್ಲಿ ಪೂರ್ಣ ಗೊಳ್ಳಬೇಕು ಎಂದರು.
ಪರಿಶೀಲನೆ ವೇಳೆ ಮೈಷು ಗರ್ ಕಾರ್ಖಾನೆ ವ್ಯವಸ್ಥಾಪಕ ನಿರ್ದೇಶಕ ಅಪ್ಪಾ ಸಾಹೇಬ್ ಪಾಟೀಲ್,ಪಾಂಡವಪುರ ಉಪವಿಭಾಗಾಧಿಕಾರಿ ಶಿವಾನಂದ ಮೂರ್ತಿ ಸೇರಿದಂತೆ ಇನ್ನಿತರ ಅಧಿಕಾರಿಗಳು ಉಪಸ್ಥಿತ ರಿದ್ದರು.