ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡ ಹಾಗೂ ಮಂಡ್ಯ ಗಾಂಧಿ ಭವನ ಟ್ರಸ್ಟ್ ಕಾರ್ಯದರ್ಶಿ ಮಲ್ಲಯ್ಯನದೊಡ್ಡಿ ಎನ್. ರಾಜು ಇಂದು ನಿಧನರಾಗಿದ್ದಾರೆ.
ಮೃತರ ಅಂತಿಮ ದರ್ಶನಕ್ಕಾಗಿ ಪಾರ್ಥಿವ ಶರೀರವನ್ನು ಸ್ವಗೃಹ ಮಂಡ್ಯ ನಗರದ ಹೊಸಹಳ್ಳಿಯಲ್ಲಿ ಇರಿಸಲಾಗಿದ್ದು, ನಂತರ ಮಂಡ್ಯದ ಗಾಂಧಿಭವನದಲ್ಲಿ ಅಂತಿಮ ದರ್ಶನಕ್ಕೆ ಇರಿಸಲಾಗುವುದು.
ನಾಳೆ ಬೆಳಿಗ್ಗೆ ಮಂಡ್ಯ ತಾಲ್ಲೂಕಿನ ಮಲ್ಲಯ್ಯನ ದೊಡ್ಡಿ ಗ್ರಾಮದಲ್ಲಿ ಬೆಳಿಗ್ಗೆ 10-30 ಅವರ ಪಾರ್ಥಿವ ಶರೀರ ಅಂತ್ಯ ಸಂಸ್ಕಾರ ನಡೆಯಲಿದೆ. ರಾಜು ಅವರ ನಿಧನಕ್ಕೆ ಮಂಡ್ಯ ಜಿಲ್ಲಾ ಕಾಂಗ್ರೆಸ್ ಸಮಿತಿ ಸಂತಾಪ ಸೂಚಿಸಿದೆ.