Thursday, September 19, 2024

ಪ್ರಾಯೋಗಿಕ ಆವೃತ್ತಿ

ನಾಗಮಂಗಲ | ಸಾಲಬಾಧೆಯಿಂದ ಬೇಸತ್ತ ರೈತ ವಿಷ ಕುಡಿದು ಆತ್ಮಹತ್ಯೆ

ಮಂಡ್ಯ ಜಿಲ್ಲೆಯ ನಾಗಮಂಗಲ ತಾಲ್ಲೂಕಿನ ಬಲ್ಲಾವಳ್ಳಿ ಗ್ರಾಮದ ಲೇಟ್ ಅಮಾಸೇಗೌಡರ ಪುತ್ರ ಪರಮೇಶ್ (55) ಆತ್ಮಹತ್ಯೆ ಮಾಡಿಕೊಂಡಿರುವ ರೈತ.

ರೈತ ಪರಮೇಶ್  ತನಗಿರುವ 30ಗುಂಟೆ ಕೃಷಿ ಜಮೀನಿನ ಜೊತೆಗೆ ಬೇರೆಯವರ ಜಮೀನು ಬಳಸಿಕೊಂಡು ತರಕಾರಿ ಬೆಳೆಯುವ ಸಲುವಾಗಿ ಸ್ಥಳೀಯ ಸ್ತ್ರೀ ಶಕ್ತಿ ಸ್ವ ಸಹಾಯ ಸಂಘ ಮತ್ತು ಖಾಸಗಿ ವ್ಯಕ್ತಿಗಳಿಂದ ಹೆಚ್ಚು ಸಾಲ ಮಾಡಿದ್ದರು ಎನ್ನಲಾಗುತ್ತಿದೆ.

ಬೆಳೆ ನಷ್ಟದಿಂದಾಗಿ ಕಂಗಾಲಾಗಿ ಆತ್ಮಸ್ಥೈರ್ಯ ಕಳೆದುಕೊಂಡು ಕಳೆದೆರಡು ದಿನಗಳ ಹಿಂದೆ ವಿಷ ಕುಡಿದಿದ್ದ ಪರಮೇಶ್ ನನ್ನು ತಾಲ್ಲೂಕಿನ ಆದಿಚುಂಚನಗಿರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಚಿಕಿತ್ಸೆ ಫಲಿಸದೆ ಶುಕ್ರವಾರ ತಡರಾತ್ರಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ.

ಈ ಸಂಬಂಧ ತಾಲ್ಲೂಕಿನ ಬೆಳ್ಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!