Thursday, September 19, 2024

ಪ್ರಾಯೋಗಿಕ ಆವೃತ್ತಿ

ನಾಗಮಂಗಲ| ಪುರಸಭೆ ಅಧ್ಯಕ್ಷ- ಉಪಾಧ್ಯಕ್ಷರಿಂದ ಅಧಿಕಾರ ಸ್ವೀಕಾರ

ಕೃಷಿ ಸಚಿವ ಚಲುವರಾಯಸ್ವಾಮಿ ಬೆಂಬಲಿಯತರಾಗಿ ನಾಗಮಂಗಲ ಪುರಸಭೆ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಅಲಿ ಅನ್ಸರ್ ಪಾಷಾ ಹಾಗೂ ಉಪಾಧ್ಯಕ್ಷರಾಗಿ ಆಯ್ಕೆಯಾಗಿರುವ ವಸಂತ ಲಕ್ಷ್ಮಿ ಅಶೋಕ್ ಅವರು ಗುರುವಾರ ಅಧಿಕಾರ ಸ್ವೀಕಾರ ಮಾಡಿದರು.

ಈ ಸಂದರ್ಭದಲ್ಲಿ ಅನ್ಸರ್ ಪಾಷ ಮಾತನಾಡಿ, ಸಚಿವ ಚಲುವರಾಯಸ್ವಾಮಿ ಸೇರಿದಂತೆ ಎಲ್ಲಾ ಸದಸ್ಯರ ಸಹಕಾರದಿಂದ ನಾಗಮಂಗಲ ಪಟ್ಟಣವನ್ನು ಅಭಿವೃದ್ದಿಗೊಳಿಸುವುದಾಗಿ ತಿಳಿಸಿದರು.

ಉಪಾಧ್ಯಕ್ಷರಾದ ವಸಂತ ಲಕ್ಷ್ಮಿ ಅಶೋಕ್ ಮಾತನಾಡಿ, ನನ್ನನ್ನು ಉಪಾಧ್ಯಕ್ಷರಾಗಿ ಆಯ್ಕೆ ಮಾಡಿದ ನಮ್ಮೆಲ್ಲರ ನೆಚ್ಚಿನ ನಾಯಕರಾದ ಕೃಷಿ ಸಚಿವ ಚೆಲುವರಾಯಸ್ವಾಮಿ ಅವರಿಗೆ ನನ್ನ ಅಭಿನಂದನೆಗಳನ್ನು ತಿಳಿಸುವೆ, ಪುರಸಭೆಯ ಸರ್ವ ಸದಸ್ಯರ ಜೊತೆಗೂಡಿ ಅಭಿವೃದ್ಧಿ ಕಾರ್ಯಗಳಿಗೆ ಕೈಜೋಡಿಸುತ್ತೇನೆ ಎಂದು ತಿಳಿಸಿದರು.

ಇದೇ ಸಂದರ್ಭದಲ್ಲಿ ಮುಖ್ಯಾಧಿಕಾರಿ ಶ್ರೀನಿವಾಸ ಹಾಗೂ ಕಚೇರಿ ಸಿಬ್ಬಂದಿಯವರು ನೂತನ ಅಧ್ಯಕ್ಷ,  ಉಪಾಧ್ಯಕ್ಷರಿಗೆ ಶುಭಕೋರಿದರು.

ಪುರಸಭೆ ಸದಸ್ಯರಾದ ರಮೇಶ್, ರಾಜ್ಯ ಕೆ.ಪಿ.ಸಿ.ಸಿ. ಸದಸ್ಯ ಕೊಣನೂರು ಹನುಮಂತು, ರವಿಕಾಂತೇಗೌಡ, ಬದರಿ ಕೊಪ್ಪಲು ಚಂದ್ರು, ಕಾಂಗ್ರೆಸ್ ಕಾರ್ಯಕರ್ತರು ಮತ್ತು ಉಪ್ಪಾರಹಳ್ಳಿ ಗ್ರಾಮದ ಮುಖಂಡರು ಉಪಸ್ಥಿತರಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!